ಪುತ್ತೂರು, ಮೇ.17 (DaijiworldNews/HR): ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ನೆಕ್ಕಿಲಾಡಿ ಗ್ರಾಮದ ದರ್ಬೆ ನಿವಾಸಿ ಸುರೇಶ್ ಪ್ರಭು (40) ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಹಿಳೆಗೆ ಮದುವೆಯಾಗಿದ್ದು, ಅವರ ಪತಿ ಕಳೆದ ಹತ್ತು ತಿಂಗಳಿನಿಂದ ಗುಜರಾತ್ನಲ್ಲಿದ್ದು, ಈ ಅವಧಿಯಲ್ಲಿ ಮಹಿಳೆ ಗರ್ಭಿಣಿ ಎಂದು ತಿಳಿದು ಬಂದಿದ್ದು, ಈ ವಿಷಯವನ್ನು ತನಿಖೆ ನಡೆಸಿದಾಗ ಆರೋಪಿಯ ದುಷ್ಕೃತ್ಯ ಬೆಳಕಿಗೆ ಬಂದಿದೆ.
ಈ ಸಂಬಂಧ ಮಹಿಳೆ ತಾಯಿ ಮೇ 15 ರಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.