ಬಂಟ್ವಾಳ, ಮೇ 17 (DaijiworldNews/MS): ಲಸಿಕೆ ಪಡೆಯುವ ಅರ್ಹರನ್ನು ಗುರುತಿಸುವಲ್ಲಿ ಎಡವುತ್ತಿರುವ ಸಿಬಂದಿಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತರಾಟೆಗೆ ತೆಗೆದುಕೊಂಡರು.ಅವರು ಬೋಳಂತೂರು ಗ್ರಾ.ಪಂ.ನಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿದರು.
ಸದಸ್ಯರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ನಿಮ್ಮ ಮಾತನ್ನು ಕೇಳದೇ ಇದ್ದರೆ ನಮಗೆ ತಿಳಿಸಿ ಎಂದು ಸಲಹೆ ನೀಡಿದರು. ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ಸಮಸ್ಯೆಗಳ ಕುರಿತು ತಮ್ಮ ಗಮನಕ್ಕೆ ತರುವಂತೆ ಸಲಹೆ ನೀಡಿದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿರಾಜಣ್ಣ ಮಾತನಾಡಿ, ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿಯನ್ನು ತಿಳಿದುಕೊಂಡು ಕೆಲಸ ಮಾಡಬೇಕು. ಹೆಚ್ಚಿನ ಮೇಲ್ವಿಚಾರಣೆ ಕೆಲಸ ಮಾಡಬೇಕು. ಹೊರ ರಾಜ್ಯ, ಜಿಲ್ಲೆಯಿಂದ ಬಂದವರು ಕ್ವಾರಂಟೈನ್ ನಲ್ಲಿರುವಂತೆ ನೋಡಿಕೊಳ್ಳಬೇಕು.ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಮಧ್ಯದ ಅಸಮಾಧಾನ ಹೊರ ಹಾಕಿದರು. ಈ ಮೊದಲು ಆಗಿರುವುದು ಬಿಟ್ಟು ಬಿಡಿ, ಮುಂದಿನ ದಿನಗಳಲ್ಲಿ ಸಮರ್ಪಕ ವಾಗಿ ಕೆಲಸ ಮಾಡಿ ಎಂದು ಶಾಸಕರು ಸಲಹೆ ನೀಡಿದರು.
ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಶಾಸಕರ ವಾರ್ ರೂಂ ಪ್ರಮುಖರಾದ ದೇವದಾಸ್ ಶೆಟ್ಟಿ, ದೇವಪ್ಪ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಬೋಳಂತೂರು ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ, ಉಪಾಧ್ಯಕ್ಷೆ ಮಹಾಲಕ್ಷ್ಮೀ, ಅಭಿವೃದ್ಧಿ ಅಧಿಕಾರಿ ಪುಷ್ಪಾ ಎಂ, ಗ್ರಾಮಕರಣಿಕ ಕರಿಬಸಪ್ಪ, ಗ್ರಾ.ಪಂ.ಸದಸ್ಯರು, ಟಾಸ್ಕ್ ಫೋರ್ಸ್ ಸಮಿತಿಯವರು ಉಪಸ್ಥಿತರಿದ್ದರು.