ಬೈಂದೂರು, ಮೇ.17 (DaijiworldNews/HR): ಗಾಳಿಮಳೆಗೆ ಬಿದ್ದಿದ್ದ ವಿದ್ಯುತ್ ತಂತಿಗಳ ದುರಸ್ತಿ ನಡೆಸುತ್ತಿದ್ದ ಸಂಧರ್ಭದಲ್ಲಿ ರಸ್ತೆಯಲ್ಲಿ ಬೈಕ್ನಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರ ಕುತ್ತಿಗೆಗೆ ವಿದ್ಯುತ್ ತಂತಿ ಸಿಲುಕಿ ಮೃತಪಟ್ಟಿರುವ ಘಟನೆ ಬೈಂದೂರು ತಾಲೂಕು ಹೇರೂರು ಗ್ರಾಮದ ಹೇರೂರು-ಅರೆಹೊಳೆ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಆಲಗದ್ದೆ ಯರುಕೋಣಿ ನಿವಾಸಿ ಶೇಖರ್ ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಗಾಳಿಮಳೆಗೆ ಬಿದ್ದಿದ್ದ ವಿದ್ಯುತ್ ತಂತಿಗಳ ದುರಸ್ತಿ ನಡೆಸುತ್ತಿದ್ದ ಸಂಧರ್ಭದಲ್ಲಿ ಯಾವುದೇ ಸೂಚನ ಫಲಕ ಅಳವಡಿಸದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ವಿದ್ಯುತ್ ತಂತಿ ದುರಸ್ಥಿ ಮಾಡುತ್ತಿದ್ದ ಸಂಧರ್ಭದಲ್ಲಿ ತಂತಿ ಕೆಳಗೆ ಬಂದು ಬೈಕ್ ನಲ್ಲಿ ಸಾಗುತ್ತಿದ್ದ ಶೇಖರ್ ಶೆಟ್ಟಿ ಕುತ್ತಿಗೆ ಸಿಲುಕಿದ ಪರಿಣಾಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.