ಬಂಟ್ವಾಳ, ಮೇ.18 (DaijiworldNews/PY): ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಎರಡು ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (24) ಮೃತಪಟ್ಟ ಯುವಕ.
ಮಾ.10 ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು, ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಎರಡು ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನಯ್ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.