ಕಾರ್ಕಳ, ಮೇ.18 (DaijiworldNews/HR): ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತವು ಹೊರಡಿಸಿದ ಕೊರೊನಾ ಕರ್ಪ್ಯೂ ವಿಧಿಸಿ ಆದೇಶ ಉಲ್ಲಂಘಿಸಿ ವ್ಯಾಪಾರದಲ್ಲಿ ತೊಡಗಿಸಿದ ವ್ಯಾಪಾರಿಯೊಬ್ಬರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಸಾಂಧರ್ಭಿಕ ಚಿತ್ರ
ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಜಿನಸಿ ಅಂಗಡಿಗಳನ್ನು ತೆರೆಯಲು ಜಿಲ್ಲಾಡಳಿತವು ಅನುಮತಿ ನೀಡಿದ್ದು, ಈ ಆದೇಶವನ್ನು ಉಲ್ಲಂಘಿಸಿ ವ್ಯಾಪಾರಿಯೊಬ್ಬರು ಅಂಗಡಿ ತೆರೆದಿದ್ದರು.
ಸಾಣೂರು ಗ್ರಾಮದ ಕುಂಟಲ್ಪಾಡಿ ನಿವಾಸಿ ಪ್ರಕಾಶ ಎಂಬವರು ಕುಂಟಲ್ಪಾಡಿಯಲ್ಲಿ ತನ್ನ ಮಾಲಕತ್ವದಲ್ಲಿರುವ ಅಂಗಡಿಯನ್ನು ಸಂಜೆ 6:30ಕ್ಕೆ ತೆರೆದು ವ್ಯಾಪಾರ ನಡೆಸುತ್ತಿದ್ದು, ಖಚಿತ ಮಾಹಿತಿ ಪಡೆದ ಪೊಲೀಸರು ಅಂಗಡಿಯನ್ನು ಮುಚ್ಚಿಸಿ ಆರೋಪಿ ಪ್ರಕಾಶ್ ವಿರುದ್ಧ ಪ್ರಕರಣದ ದಾಖಲಿಸಿದ್ದಾರೆ.