ಉಡುಪಿ, ಮೇ 19 (DaijiworldNews/MS): ಜಿಲ್ಲೆಯಲ್ಲಿ ನಿರ್ಬಂಧ ಜಾರಿಯಲ್ಲಿದ್ದರೂ ಹಲವು ಅಂಗಡಿ ಮಾಲಕರು ಹಾಗೂ ವಾಹನ ಸವಾರರು ಲಾಕ್ ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸುತ್ತಿರುವ ಮಾಹಿತಿ ಆಧಾರ ಮೇಲೆ ಮೇ 19 ರ ಬುಧವಾರ ನಗರ ಹಾಗೂ ಮಲ್ಪೆ ಪ್ರದೇಶದಲ್ಲಿ ಧಿಡೀರ್ ದಾಳಿ ನಡೆಸಿದ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.
ಈ ವೇಳೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇತರೆ ವಸ್ತುಗಳನ್ನು ಮಾರಾಟಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಜನರು ಹತ್ತಿರದ ಕಿರಾಣಿ ಮತ್ತು ತರಕಾರಿ ಅಂಗಡಿಗಳಿಗೆ ಕಾಲ್ನಡಿಗೆಯಲ್ಲಿ ಭೇಟಿ ನೀಡಬೇಕು ಎಂದು ಅವರು ಎಚ್ಚರಿಸಿದರು. ಇದಲ್ಲದೆ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿರುವವರ ಕಠಿಣ ಎಚ್ಚರಿಕೆ ನೀಡಿದ ಅವರು ವಾಹನಗಳನ್ನು ಸೀಜ್ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.
ಇದರೊಂದಿಗೆ ಲಾಕ್ಡೌನ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅವರು ಪೊಲೀಸರಿಗೆ ಸೂಚನೆ ನೀಡಿದರು. ಮಂಗಳವಾರ ತಾನೆ ಜಿಲ್ಲಾಧಿಕಾರಿ ಅನಗತ್ಯವಾಗಿ ರಸ್ತೆಯನ್ನು ಚಲಾಯಿಸುವುದರ ವಿರುದ್ಧ ಜನರಿಗೆ ಕಠಿಣ ಎಚ್ಚರಿಕೆ ನೀಡಿದ್ದರು.