ಮಂಗಳೂರು, ಮೇ.19 (DaijiworldNews/HR): ಕೋವಿಡ್ ಎರಡನೇ ಅಲೆಯ ಹೆಚ್ಚಳದ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯಗಳ ಕಾರ್ಮಿಕರಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ರಾಜ್ಯಸರ್ಕಾರ 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, "ನಮಗೆ ಈ ಪ್ಯಾಕೇಜ್ ಬೇಡ ಅದರ ಬದಲು ಬಡ ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ನೀಡಿ" ಎಂದು ಸರ್ಕಾರಕ್ಕೆ ಆಟೋ ಚಾಲಕರು ಮನವಿ ಮಡಿಕೊಂಡಿದ್ದಾರೆ.
ಇಂದು ಫೋಷಣೆ ಮಾಡಿದ ಪ್ಯಾಕೇಜ್ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ಆಟೋ ಚಾಲಕರು, "ಸರ್ಕಾರವು ನಮಗೆ ಮೂರು ಸಾವಿರ ಪ್ಯಾಕೇಜ್ ಘೋಷಣೆ ಮಾಡಿದೆ, ಆದರೆ ಈ ಹಿಂದೆ ಲಾಕ್ಡೌನ್ ಸಮಯಯಲ್ಲಿ ಘೋಷಿಸಿದ 5 ಸಾವಿರ ಹಲವರಿಗೆ ಇನ್ನೂ ದೊರೆತಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಾರಿ 3 ಸಾವಿರ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡುವ ಬದಲು ಸರ್ಕಾರಿ ಆಸ್ಪತ್ರೆಯಂತೆ ಖಾಸಗಿ ಆಸ್ಪತ್ರೆಯಲ್ಲಿ ಬಡ ಕೊವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಿ" ಎಂದು ಸರ್ಕಾರಕ್ಕೆ ಆಟೋ ಚಾಲಕರು ಮನವಿ ಮಾಡಿಕೊಂಡಿದ್ದಾರೆ.