ಪಡುಬಿದ್ರಿ, ಮೇ.19 (DaijiworldNews/HR): ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಕಾಪು ತಾಲೂಕಿನ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ಗೆ ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ನೀಡಿ ಬ್ಲೂ ಫ್ಲಾಗ್ ಕಡಲ ತೀರದಲ್ಲಿ ಉಂಟಾದ ಹಾನಿಯನ್ನು ವೀಕ್ಷಿಸಿದ್ದಾರೆ.
"ಹಾನಿಗೊಳಗಾದ ಕಡಲ ತೀರವನ್ನು ಸಮರೋಪಾದಿಯಲ್ಲಿ ಒಂದು ವಾರದ ಒಳಗಾಗಿ ಸರಿಪಡಿಸಿ ಪ್ರವಾಸಿಗರ ಆಕರ್ಷಣೆಗೆ ಉಪಯೋಗವಾಗುವಂತೆ ಮಾಡಲಾಗುವುದು. ತಕ್ಷಣವೇ ಸ್ವಚ್ಛಗೊಳಿಸಿ ಮೊದಲಿದ್ದಂತೆ ಸುಸ್ಥಿತಿಗೆ ತರುವುದಾಗಿ ಸ್ಥಳದಲ್ಲಿ ಹಾಜರಿದ್ದ ಬ್ಲೂ ಫ್ಲ್ಯಾಗ್ ಸಿಬ್ಬಂದಿಗಳು ಈ ವೇಳೆ ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.
ಇನ್ನು ಬ್ಲೂ ಫ್ಲ್ಯಾಗ್ ಬೀಚ್ ನಿರಂತರವಾಗಿ ಸುಸಜ್ಜಿತವಾಗಿ ಮುಂದುವರೆಸಿಕೊಂಡು ಹೋಗಲು ಅವಶ್ಯಕವಾಗಿರುವ ಎಲ್ಲಾ ಉಪಕ್ರಮ ಕೈಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಸ್ಥಳದಲ್ಲಿ ಹಾಜರಿದ್ದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಸೋಮಶೇಖರ ಬನವಾಸಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಬ್ಲೂ ಫ್ಲ್ಯಾಗ್ ಬೀಚ್ ಮ್ಯಾನೇಜರ್ ವಿಜಯ ಶೆಟ್ಟಿ, ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ರಮೇಶ್ ದೇವಾಡಿಗ, ಗ್ರಾಮ ಸಹಾಯಕ ಜಯರಾಂ, ಸ್ಥಳೀಯ ಪೋಲೀಸ್ ಠಾಣೆ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.