ಉಡುಪಿ, ಮೇ.19 (DaijiworldNews/HR): ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳಲ್ಲಿ ಕಸ ಎಸೆಯಲು ಬಳಸುವ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಈ ಕುರಿತು ತಿಳಿಸಿರುವ ಅವರು, "ಅನೇಕರು ಕಸವನ್ನು ರಸ್ತೆ ಬದಿಗಳಲ್ಲಿ ಎಸೆಯುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಕಸ ಎಸೆಯಲು ಬಳಸುವ ವಾಹನಗಳನ್ನು ಸ್ಥಳೀಯ ಆಡಳಿತವು ವಶಪಡಿಸಿಕೊಳ್ಳುತ್ತದೆ. ಅಂತಹ ವಾಹನಗಳನ್ನು ಕಸ ಸಂಗ್ರಹಿಸಲು ಬಳಸಲಾಗುತ್ತದೆ" ಎಂದಿದ್ದಾರೆ.
ಇನ್ನು ಲಾಕ್ಡೌನ್ ಸಮಯದಲ್ಲಿ ಕೂಡ ಉಡುಪಿಯ ಕೆಲವು ಭಾಗಗಳಲ್ಲಿರುವ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳಲ್ಲಿ ಕಸವನ್ನು ಎಸೆಯುತ್ತಿದ್ದಾರೆ.