ಉಡುಪಿ, ಮೇ 20 (DaijiworldNews/SM): ದಿ ಮಲಂಕರಾ ಆರ್ಥೋಡಾಕ್ಸ್ ಸಿರಿಯನ್ ಚರ್ಚ್ ಗೆ ಸೇರಿದ ಬ್ರಹ್ಮಾವರ ಧರ್ಮಪ್ರಾಂತ್ಯದ ಉಡುಪಿ ಮತ್ತು ಚಿಕ್ಕಮಗಳೂರು ಚರ್ಚ್ ಗಳು, ಸಂಸದೆ ಶೋಭಾ ಕರಂದ್ಲಾಜೆ ಅವರು ನೀಡಿರುವ ಕ್ರೈಸ್ತ ವಿರೋಧಿ ಹೇಳಿಕೆಯನ್ನು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತವೆಂದು ಖಂಡಿಸಿದ್ದಾರೆ.
ಕ್ರೈಸ್ತ ಸಮುದಾಯವು ಇತರ ಎಲ್ಲಾ ಕ್ರಿಶ್ಚಿಯನ್ ಚರ್ಚುಗಳು ಮತ್ತು ಪಂಗಡಗಳೊಂದಿಗೆ ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಸಮರದ ಹಾದಿಯಲ್ಲಿದೆ. ಸರಕಾರದ ಎಲ್ಲಾ ನಿಯಮಗಳನ್ನು ಪಾಲಿಸುವುದು, ಜಾಗೃತಿ ಮೂಡಿಸುವುದು, ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕ್ರಮಗಳನ್ನು ಜಾರಿಗೆ ತರುವುದು ಮತ್ತು ಅಗತ್ಯವಿರುವವರಿಗೆ ಮತ್ತು ಬಡವರಿಗೆ ನೆರವು ನೀಡುವುದು ಮಾಡುತ್ತಾ ಬಂದಿದೆ. ಬಿಷಪ್, ಧರ್ಮಗುರುಗಳು ಮತ್ತು ಸಮುದಾಯದ ಇತರ ಮುಖ್ಯಸ್ಥರುಗಳೊಂದಿಗೆ ನಿಯಮಿತವಾಗಿ ಸಭೆಗಳನ್ನು ಕರೆದು ರೋಗ ನಿಯಂತ್ರಣದ ಕುರಿತು ಸಲಹೆ ಸೂಚನೆಗಳನ್ನು ನೀಡುತ್ತಾ ಬಂದಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಚರ್ಚುಗಳು ಸಾರ್ವಜನಿಕರಿಗಾಗಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ ಮತ್ತು ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯನಿರ್ವಹಿಸುತ್ತಿವೆ, ಹೀಗಾಗಿ ಎಲ್ಲಾ ಭಕ್ತರು ಮತ್ತು ಸಂದರ್ಶಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ನಾವು ಖಾತ್ರಿಪಡಿಸುತ್ತೇವೆ ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುತ್ತೆವೆ.
ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು, ವಿವಿಧ ಚರ್ಚ್ ಗಳಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ತಂಡಗಳು ಮತ್ತು ಕೋವಿಡ್ ಯೋಧರ ತಂಡಗಳನ್ನು ರಚಿಸಲಾಗಿದೆ. ಲಸಿಕೆ ಪಡೆಯಲು ಅವರು ಪ್ರತಿಯೊಂದು ಕುಟುಂಬಕ್ಕೂ ಸಹಾಯ ಮಾಡುತ್ತಾ ಇದ್ದಾರೆ. ರೋಗಲಕ್ಷಣದ ಮತ್ತು ಶಂಕಿತರನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಹೋಗುವುದರ ಜೊತೆಗೆ ಹೋಂ ಐಸೋಲೇಷನ್ ನಲ್ಲಿ ಇರುವ ರೋಗಿಗಳಿಗೆ ವೈದ್ಯಕೀಯ ಅಗತ್ಯಗಳನ್ನು ಒದಗಿಸುವಲ್ಲಿ ಅವರು ನಿರತರಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕಳೆದ ವರ್ಷದ ಲಾಕ್ಡೌನ್ ಸಮಯದಲ್ಲಿ ಜಾತಿ, ಮತ ಮತ್ತು ಧರ್ಮವನ್ನು ಲೆಕ್ಕಿಸದೆ ಬಡವರು ಮತ್ತು ನಿರ್ಗತಿಕರ ವೈದ್ಯಕೀಯೇತರ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸುವಲ್ಲಿ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ.
ಸಮುದಾಯವು ತನ್ನ ಅನೇಕ ಹಾಸ್ಟೆಲ್ ಗಳು, ಸಭಾಂಗಣಗಳು, ಶಾಲೆಗಳನ್ನು ಕೋವಿಡ್ ಆರೈಕೆ ಕೇಂದ್ರಗಳಾಗಿ ಪರಿವರ್ತಿಸಲು ಕ್ರಮ ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಲಿಖಿತ ಮನವಿಯನ್ನು ಸಲ್ಲಿಸಿದೆ ಎಂಬುದನ್ನು ಸಹ ಗಮನಿಸಬೇಕು. ಇದೀಗ ನಮ್ಮ ರಾಷ್ಟ್ರದಾದ್ಯಂತ, ಅನೇಕ ಕ್ರಿಶ್ಚಿಯನ್ ಆಸ್ಪತ್ರೆಗಳು, ಶಾಲೆಗಳು ಮತ್ತು ಇತರ ಸೌಲಭ್ಯಗಳು ಕೋವಿಡ್ ಸಂಬಂಧಿತ ಚಿಕಿತ್ಸೆಗಾಗಿ ಬಳಕೆಯಲ್ಲಿವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕ್ರಿಶ್ಚಿಯನ್ ಪಾದ್ರಿಗಳು, ಧಾರ್ಮಿಕ, ವೈದ್ಯಕೀಯ ವೃತ್ತಿಪರರು ಮತ್ತು ಸ್ವಯಂಸೇವಕರ ಸೇವೆಯು ಮಹತ್ವದ್ದಾಗಿದೆ ಮತ್ತು ಅನೇಕರು ಮುಂಚೂಣಿಯಲ್ಲಿರುವುದರಿಂದ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಕೆಲಸವು ಪ್ರಮುಖವಾದುದು ಮತ್ತು ಅದನ್ನು ನಿರ್ಲಕ್ಷಿಸಲು ಅಥವಾ ಅಂತಹ ಅವಮಾನಕರ ಹೇಳಿಕೆಗಳಿಗೆ ಬಳಸಲಾಗುವುದಿಲ್ಲ .
ಸಂಸದೆ ಶೋಭಾ ಕರಂದ್ಲಾಜೆ ಅವರು ಲಸಿಕೆಗಳ ಕೊರತೆಯನ್ನು ನೀಗಿಸಲು ಮತ್ತು ಅಗತ್ಯ ವೈದ್ಯಕೀಯ ಅಗತ್ಯಗಳು ಮತ್ತು ಸೌಲಭ್ಯಗಳನ್ನು ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಒದಗಿಸಲು ಕ್ರಮಗಳನ್ನು ಕೈಗೂಳ್ಳಬೇಕು ಎಂದು ಬ್ರಹ್ಮಾವರ ಧರ್ಮಪ್ರಾಂತ್ಯದ ಕೌನ್ಸಿಲ್ ಸದಸ್ಯ, ದಿ ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್ ನ ಫಾ. ಲಾರೆನ್ಸ್ ಡಿಸೋಜ ಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ