ಮಂಗಳೂರು, ಮೇ.21 (DaijiworldNews/PY): ರಾಷ್ಟ್ರೀಯ ಹೆದ್ದಾರಿ ಬೈಕಂಪಾಡಿಯ ದೀಪಕ್ ಪೆಟ್ರೋಲ್ ಪಂಪ್ ಬಳಿ ಸೈಕಲ್ ಸವಾರನಿಗೆ ಲಾರಿ ಢಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೃತ ಸೈಕಲ್ ಸವಾರರನ್ನು ಮಧು ಕೆ ಎಂದು ಗುರುತಿಸಲಾಗಿದೆ. ಇವರು ಹೈ ರೇಂಜ್ ಸೆಕ್ಯುರಿಟಿ ಸರ್ವಿಸಸ್ನ ಉದ್ಯೋಗಿ ಎಂದು ತಿಳಿದುಬಂದಿದೆ.
ಲಾರಿ ಚಾಲಕನನ್ನು ಸಾರ್ವಜನಿಕರು ಹಿಡಿದು ಪೋಲಿಸರಿಗೆ ಹಸ್ತಾಂತರಿಸಿದ್ದಾರೆ.