ಮೂಡಬಿದಿರೆ, ಮೇ.22 (DaijiworldNews/HR): ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ದಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿ ಗೌರವ ನಮನ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ ಮೂಡುಬಿದಿರೆಯ ಭಾಗದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಒಟ್ಟು 1500 ಐಸೋಲೆಷನ್ ಕಿಟ್ ಅನ್ನು ಮಾಜಿ ಸಚಿವರಾದ ಅಭಯಚಂದ್ರ ಜೈನ್, ಯುವ ನಾಯಕ ಮಿಥುನ್ ರೈಯವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾರವರಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕೆಪಿಸಿಸಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಯುವ ನಾಯಕ ಚಂದ್ರಹಾಸ್ ಸನಿಲ್, ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಪಡುಮಾರ್ನಾಡ್ ಗ್ರಾಮ ಪಂಚಾಯತ್ ಉಪಾಧ್ಯಕ್ಸರಾದ ಅಭಿನಂದನ್ ಬಲ್ಲಾಳ್, ಸಂತೋಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಮುರಳೀಧರ ಕೋಟ್ಯಾನ್, ಜಯಕುಮಾರ್, ಪುರುಷೋತ್ತಮ್ ನಾಯಕ್, ಅರುಣ್ ಕುಮಾರ್ ಶೆಟ್ಟಿ, ಕಿರಣ್ ಕುಮಾರ್ ಬೆಳ್ವಾಯಿ, ಯುವ ಇಂಟಕ್ ಅಧ್ಯಕ್ಷ ಸುಚಿನ್ ಮಡಿವಾಳ, ಮಹಮ್ಮದ್ ಅಸ್ಲಾಂ, ವಾಸುದೇವ ನಾಯಕ್, ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು.