ಉಡುಪಿ, ಮೇ 22 (DaijiworldNews/MS): ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ದಿನ ನಿತ್ಯದ ಆದಾಯವನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದ ಕಾರ್ಮಿಕರ ಬದುಕು ದುಸ್ತರವಾಗಿದೆ. ಕಾಂಗ್ರೆಸ್ ನ ಒತ್ತಾಯದಲ್ಲಿ ರಾಜ್ಯ ಸರ್ಕಾರದ ಘೋಷಿಸಿರುವ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಹಿಂದುಳಿದ ವರ್ಗ, ಪ್ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿ ಕಾಪಾಡದೇ ನಿರ್ಲಕ್ಷಿಸಿರುವುದು ತೀರಾ ವಿಷಾದನೀಯ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಪ್ರಮುಖ ಹಿಂದುಳಿದ ವರ್ಗಗಳಲ್ಲೊಂದಾದ ಬಿಲ್ಲವ, ತನ್ನ ಜೀವದ ಹಂಗನ್ನು ತೊರೆದು ಜೀವನೋಪಾಯಕ್ಕಾಗಿ ಮೀನುಗಾರಿಕಾ ವೃತ್ತಿಯನ್ನು ನಡೆಸುವ ಮೊಗವೀರರು ಹಾಗೂ ಮೀನು ವ್ಯಾಪಾರ ನಡೆಸುವ ಇತರ ವೃತ್ತಿಭಾಂದವರಿಗೆ ಯಾವುದೇ ರೀತಿಯ ಪ್ಯಾಕೇಜ್ ನೀಡದೆ ದ್ರೋಹವೆಸಲಾಗಿದೆ. ಇದಲ್ಲದೆ ದೇವಾಡಿಗ ಸಮುದಾಯ, ವಿಶ್ವಕರ್ಮ ಸಮಾಜ , ಕುಂಬಾರ ಸಮಾಜಶೆಟ್ಟಿಗಾರ,ಗಾಣಿಗ ಮತ್ತು ಜೋಗಿ ಹಾಗೂ ಅಲ್ಪಸಂಖ್ಯಾತ ಸಮುದಾಯದಕ್ಕೆ ಯಾವುದೇ ಪ್ಯಾಕೇಜ್ ಘೋಷನೆ ಮಾಡಿಲ್ಲ . ದೇವಸ್ಥಾನ, ಗರಡಿಗಳಲ್ಲಿ ಕೆಲಸ ಮಾಡುವ ಅರ್ಚಕರು ಮತ್ತು ಚಾಕರಿ ಮಾಡುವವರನ್ನು ಹಾಗೂ ನಲ್ಕೆಯವರನ್ನು ಗಣನೆಗೆ ತೆಗೆದುಕೊಂಡು ಸೂಕ್ತ ಸಹಾಯಧನವನ್ನು ಘೋಷಿಸದೇ ವಂಚಿಸಲಾಗಿದೆ.
ಕೂಲಿ ಕೆಲಸ ಮಾಡಿ ದುಡಿದು ತಿನ್ನುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಪರಿಸ್ಥಿತಿ ಲಾಕ್ದೌನನಿಂದಾಗಿ ತೀರಾ ಹದಗೆಟ್ಟಿದ್ಫು ಈ ವರ್ಗದ ಜನರಿಗೆ ಯಾವುದೇ ಸಹಾಯ ನೀಡದಿರುವುದರ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಮಾಜಿ ಸಚಿವರಾದ ಸೊರಕೆಯವರು ಕೂಡಲೇ ಈ ಎಲ್ಲಾ ಜಾತಿ ಮತ್ತು ವರ್ಗಗಳ ಜನರಿಗೆ ಸೂಕ್ತ ಪ್ಯಾಕೇಜನ್ನು ಸರ್ಕಾರ ಕೂಡಲೇ ಘೋಸಿಸಬೇಕೆಂದು ಆಗ್ರಹಿಸಿದ್ದಾರೆ.
ಇದೀಗ ಘೋಷಣೆ ಮಾಡಿರುವ 1,500 - 3,000 ರೂ.ಗಳ ಪ್ಯಾಕೇಜ್ ಇಂದಿನ ದುಬಾರಿಯಾದ ದಿನಸಿ ಸಾಮಾಗ್ರಿ, ಅಡುಗೆ ಅನಿಲದ ಮುಂದೆ ತೀರ ಅತ್ಯಲ್ಪವಾಗಿದ್ದು ಈ ಮೊತ್ತವನ್ನು ಹೆಚ್ಚಿಸಿ ಎಲ್ಲ ಹಿಂದುಳಿದ ವರ್ಗಗಳ ಮತ್ತು ಪ.ಜಾತಿ ಮತ್ತು ಪಂಗಡಗಳ ಜನರಿಗೂ ವಿಸ್ತರಿಸಬೇಕೆಂದು ಸೊರಕೆಯವರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳು ರೂ.1250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದೇನೆಂದು ಮಾಧ್ಯಮಗಳಲ್ಲಿ, ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ವೈಭವೀಕರಿಸುತಿದ್ದು ನೆರೆಯ ಹಾಗೂ ಅತಿ ಸಣ್ಣ ರಾಜ್ಯವಾದ ಕೇರಳದಲ್ಲಿ ರೂ 20000 ಕೋಟಿ ಪ್ಯಾಕೇಜನ್ನು ಜನಸಾಮಾನ್ಯರಿಗೆ ನೀಡಿದ್ದು ಇದನ್ನು ಮುಖ್ಯಮಂತ್ರಿಗಳು ತಿಳಿಯಬೇಕಾಗಿದೆ. ಪ್ಯಾಕೇಜ್ ಹಣವನ್ನು ಮುಖ್ಯಮಂತ್ರಿಗಳು ಅಥವಾ ಸಚಿವರ ಕೈಯಿಂದ ನೀಡುತ್ತಿಲ್ಲ ಇದು ಜನರ ತೆರಿಗೆ ಹಣದಿಂದ ನೀಡುವಂತದ್ದು. ಆದ್ದರಿಂದ ಶೀಘ್ರ ಕಾರ್ಯಗ್ರತಗೊಳಿಸುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು. ಪ್ಯಾಕೇಜ್ ಪಡೆಯಲು ನಿಗದಿಪಡಿಸಿರುವ ಅರ್ಹತೆ ಮತ್ತು ನಿಯಮಗಳನ್ನು ಸಡಿಲುಪಡಿಸಬೇಕು ಇಲ್ಲವಾದಲ್ಲಿ ಒಟ್ಟು 10 ಶೇಕಡಾ ಫಲಸನುಭವಿಗಳಿಗೂ ತಮ್ಮ ಪ್ಯಾಕೇಜ್ ತಲುಪುವುದು ಕಷ್ಟಕರ ಎಂದು ಮಾಜಿ ಸಚಿವರು ತಿಳಿಸಿದ್ದಾರೆ. ಯಾಕೆಂದರೆ ಮೊದಲನೆಯ ಅಲೆಯ ಲಾಕ್ದೌನ್ ಪ್ಯಾಕೇಜ್ ಇನ್ನೂ ಕೂಡ ಪರಿಣಾಮಕಾರಿಯಾಗಿ ಕಾರ್ಯಗತಗೊಂಡಿಲ್ಲದ ಕಾರಣ, ಅದರಂತೆ ಎರಡನೇ ಅಲೆಯ ಪ್ಯಾಕೇಜ್ ಕೂಡಾ ಘೋಷಣೆಯಾಗಿಯೇ ಉಳಿಯದೆ ರೋಗ ಹತೋಟಿ ಯೊಂದಿಗೆ ಸಾರ್ವಜನಿಕರ ಹಸಿವು ನೀಗಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳನ್ನು ವಿನಯ್ ಕುಮಾರ್ ಸೊರಕೆಯವರು ಆಗ್ರಹಿಸಿದ್ದಾರೆ.