ಉಡುಪಿ, ಮೇ.23 (DaijiworldNews/HR): ಲಾಕ್ಡೌನ್ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾನೂನು ಬಾಹಿರವಾಗಿ ಓಡಾಡುತ್ತಿದ್ದ ವಾಹನವನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು, ಅದೇ ವಾಹನದಲ್ಲಿದವರಿಂದಲೇ ರಾಷ್ಟ್ರೀಯ ಹೆದ್ದಾರಿ 66 ರ ಆಭರಣ ಮೋಟರ್ಸ್ ಎದುರಿನಿಂದ ಕಾಂಚನ ಮೋಟಾರ್ಸ್ವರೆಗೆ ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ತುಂಬಿಸಿ ಅಲೆವೂರಿನ ಡಂಪಿಂಗ್ ಯಾರ್ಡ್ಗೆ ಸಾಗಿಸಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ನಿಯಮ ಬಾಹಿರವಾಗಿ ವಾಹನಗಳಲ್ಲಿ ಸಂಚರಿಸದಂತೆ ಈ ಮೊದಲೇ ಸೂಚನೆ ನೀಡಲಾಗಿತ್ತು.
ನಿಯಮ ಉಲ್ಲಂಘಿಸಿದಲ್ಲಿ ಸದರಿ ವಾಹನವನ್ನು ಲಾಕ್ಡೌನ್ ಓದಿ ಮುಗಿಯುವವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಎಚ್ಚರಿಸಿದ್ದಾರೆ.