ಉಡುಪಿ, ಮೇ 24 (DaijiworldNews/MS): ಯುವ ಮುಂದಾಳು , ಕರಾಟೆ ಪಟು, ತೋನ್ಸೆ ಪಂಚಾಯತ್ ಉಪಾಧ್ಯಕ್ಷರಾದ ನಿತ್ಯಾನಂದ ಕೆಮ್ಮಣ್ಣು ಮೇ.24 ರ ಸೋಮವಾರ ತನ್ನ 43ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ
ಈ ಹಿಂದೆ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಗ್ರಾಮದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕಾಂಗೇಸ್ ಪಕ್ಷದ ನಾಯಕರಾಗಿದ್ದರೂ ಪಕ್ಷಭೇದವನ್ನು ದೂರವಿಟ್ಟು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೋನ್ಸೆ ಪಂಚಾಯತ್'ನ ಸರ್ವಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ಒಂದಾಗುವಂತೆ ಮಾಡಿದ್ದರು. ಒರ್ವ ಉತ್ತಮ ಕರಾಟೆಪಟು ಆಗಿದ್ದ ಅವರು ರಾಜ್ಯ ಕರಾಟೆ ಸಂಘದ ಪದಾಧಿಕಾರಿಯೂ ಆಗಿದ್ದರು. ಕ್ರೀಡಾಸೇವೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವಕ್ಕೆ ಕೂಡ ಪಾತ್ರರಾಗಿದ್ದರು. ಕಳೆದ ಕೆಲವು ದಿನಗಳಿಂದ ಕೊವಿಡ್ ಸೊಂಕಿಗೆ ತುತ್ತಾಗಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.
ಕೆಮ್ಮಣ್ಣು, ಹೂಡೆ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಉತ್ತಮ ಕರಾಟೆ ಪಟು ಆಗಿದ್ದ ಅವರು ಹಲವಾರು ಮಂದಿ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಣವನ್ನು ನೀಡುತಿದ್ದರು. ಉಡುಪಿಯಲ್ಲಿ ಹಲವಾರು ಕರಾಟೆ ಟೂರ್ನಿಗಳನ್ನು ಸಂಘಟಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.