ಮಂಜೇಶ್ವರ, ಮೇ.25 (DaijiworldNews/HR): ರಾಷ್ಟೀಯ ಹೆದ್ದಾರಿಯ ಬಂದ್ಯೋಡು ಜನಪ್ರಿಯದಲ್ಲಿ ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಸಿಬಂದಿಗಳು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬಂದ್ಯೋಡಿನ ಖಾಸಗಿ ಆಸ್ಪತ್ರೆಯ ಸಿಬಂದಿಗಳಾದ ಆಸಿಫ್, ನಿಹಾಲ್, ರಮ್ಯಾ, ಲಲಿತಾ, ಝುಲ್ಫಿಕರ್ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಆಸ್ಪತ್ರೆಗೆ ಕರ್ತವ್ಯಕ್ಕೆ ಕರೆದುಕೊಂಡು ಬರುತ್ತಿದ್ದ ಕಾರಿಗೆ ಮತ್ತು ಕೇರಳದಿಂದ ಮುಂಬೈಗೆ ಸರಕು ಹೇರಿಕೊಂಡು ತೆರಳುತ್ತಿದ್ದ ಲಾರಿ ನಡುವೆ ಅಪಘಾತ ನಡೆದಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದವರನ್ನು ಸ್ಥಳೀಯರು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.