ಉಡುಪಿ, ಮೇ 25 (DaijiworldNews/SM): ಮೇ 26ರ ಬುಧವಾರದಂದು ಉಡುಪಿ ನಗರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಇಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಕೇವಲ ಸರಕಾರ ನಿಗದಿಪಡಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಮೇ 26ರಂದು ಲಸಿಕೆ ವಿತರಣೆ ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನಗರ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಗಳಿಗೆ ಉಡುಪಿಯಲ್ಲಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ(200 ಡೋಸ್), ಜಿಲ್ಲಾ ಆಸ್ಪತ್ರೆ ಅಜ್ಜರಕಾಡು(ಸೇಂಟ್ ಸಿಸಿಲಿ ಶಾಲೆ) (250 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)(150 ಡೋಸ್) ಲಸಿಕೆಯನ್ನು ಮುಂಚೂಣಿ ಕಾರ್ಯಕರ್ತರಿಗೆ ವಿತರಣೆಗೆ ಸಿದ್ಧತೆ ಮಾಡಲಾಗಿದೆ. ಬೆಳಿಗ್ಗೆ 9.30 ರಿಂದ ಅಪರಾಹ್ನ 4.00ರ ತನಕ ಕೋವಿಶೀಲ್ಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಸರಕಾರದಿಂದ ನೀಡಲ್ಪಟ್ಟ ಅಂಗವಿಕಲರ ಗುರುತಿನ ಚೀಟಿ ಅಥವಾ ಅನುಬಂಧ-3ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವ ವಿಕಲಚೇತನರು(ಮಾನಸಿಕ ಅಸ್ವಸ್ಥತೆ ಸೇರಿದಂತೆ) ಚಿತಾಗಾರ/ಸ್ಮಶಾನ/ರುದ್ರ ಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು, ಕೋವಿಡ್ ಕರ್ತವ್ಯ ನಿರ್ವಹಿಸಲು ಆದೇಶ ಪತ್ರ ಪಡೆದ ಕೋವಿಡ್ ಕರ್ತವ್ಯ ನಿರ್ವಹಿಸಿದ ಶಿಕ್ಷಕರು ಲಸಿಕೆ ಪಡೆಯಬಹುದಾಗಿದೆ.
ಸರಕಾರಿ ಸಾರಿಗೆ ಸಿಬ್ಬಂದಿ ಬ್ಯಾಡ್ಜ್ ಹೊಂದಿರುವ ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರು ವಿದ್ಯುತ್ ಮತ್ತು ನೀರು ಸರಬರಾಜು ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಂಚೆ ಇಲಾಖೆಯ ಸಿಬ್ಬಂದಿಗಳು ಬೀದಿ ಬದಿಯ ವ್ಯಾಪಾರಸ್ಥರು(ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಆಡಳಿತದಿಂದ ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು) ಖಚಿತ ಪಡಿಸಿಕೊಂಡು ಹತ್ತಿರದ ಕೇಂದ್ರದ ಮೂಲಕ ಲಸಿಕೆ ಪಡೆಯಬಹುದಾಗಿದೆ.
ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಯೋವೃದ್ಧರು/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಮಾಧ್ಯಮದವರು, ಆಯಿಲ್ ಇಂಡಸ್ಟ್ರೀ ಮತ್ತು ಗ್ಯಾಸ್ ಸರಬರಾಜು ಮಾಡುವವರು(ಪೆಟ್ರೋಲ್ ಬಂಕ್, ಕರ್ಮಚಾರಿಗಳು)- ಆಸ್ಪತ್ರೆಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಕ್ಸಿಜನ್/ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು, ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎ.ಪಿ.ಎಂ.ಸಿ) ಕೆಲಸಗಾರರು, ರಾಜ್ಯ ಸರಕಾರ ಗುರುತಿಸಿರುವ 18 ವಿಧದ ಆದ್ಯತಾ ಗುಂಪುಗಳಿಗೆ ಲಸಿಕೆ ವಿತರಣೆಗೆ ನಿರ್ಧರಿಸಲಾಗಿದೆ.