ಮಂಗಳೂರು, ಮೇ 25 (DaijiworldNews/SM): ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಮಲ್ಲೂರು ಗ್ರಾಮ ಪಂಚಾಯಿತಿಯ ಸಾರ್ವಜನಿಕ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗೆ ಹಲ್ಲೆ ನಡೆಸಿರುವ ಘಟನೆ ಮೇ 25ರ ಮಂಗಳವಾರ ನಡೆದಿದೆ. ಐವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪಿಡಿಒ ರಾಜೇಂದ್ರ ಶೆಟ್ಟಿ ಅವರು ಗ್ರಾಮ ಪಂಚಾಯಿತಿ ಕಚೇರಿಯ ಸಮೀಪದಲ್ಲಿದ್ದ ಐದು ಮಂದಿ ಯುವಕರಿಗೆ ಮಾಸ್ಕ್ ಧರಿಸಿ ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಕೇಳಿದ್ದರು ಎಂದು ಹೇಳಲಾಗಿದೆ. ಆದರೆ, ಆ ಯುವಕರ ತಂಡ ಆಕ್ಷೇಪ ವ್ಯಕ್ತಪಡಿಸಿ ಪಿಡಿಒ ಮೇಲೆ ಹಲ್ಲೆ ನಡೆಸಿದ್ದಾರೆ ಎಂಡು ಹೇಳಲಾಗಿದೆ. ಅಬೂಬಕರ್ ಮತ್ತು ಇತರ ನಾಲ್ವರು ಹಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಂಗಳೂರು ಗ್ರಾಮೀಣ ಪೊಲೀಸರು ಕರ್ನಾಟಕ ಸಾಂಕ್ರಾಮಿಕ ಕಾಯ್ದೆಯ ಐಪಿಸಿ ಸೆಕ್ಷನ್ 332, 504, 34 ಮತ್ತು ಸೆಕ್ಷನ್ 5 (1) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.