ಉಡುಪಿ, ಮೇ. 27 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆಯನ್ನು ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೆ ರದ್ದುಗೊಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಬುಧವಾರ, ಶನಿವಾರ ಮತ್ತು ಭಾನುವಾರಗಳಂದು ನಡೆಯುತ್ತಿದ್ದ ಸಗಟು ಹಾಗೂ ಚಿಲ್ಲರೆ ವ್ಯಾಪಾರ ವಹಿವಾಟನ್ನು ಜೂನ್ 7ರ ವರೆಗೆ ನಿಷೇಧಿಸಲಾಗಿದೆ.
ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸಹಕರಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.