ಕಾಸರಗೋಡು, ಮೇ. 27 (DaijiworldNews/HR): ಬೆಂಕಿ ತಗಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಮೃತಪಟ್ಟವರನ್ನು ಪೆರ್ಮುದೆ ಎಡಕ್ಕಾನದ ಐತಪ್ಪ ಗೌಡರ ಪತ್ನಿ ಜಾನಕಿ(53) ಎಂದು ಗುರುತಿಸಲಾಗಿದೆ.
ಮೇ 15 ರಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಸೀರೆಗೆ ಬೆಂಕಿ ತಗಲಿ ಸುಟ್ಟ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡ ಜಾನಕಿಯವರನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.