ಮಂಗಳೂರು, ಮೇ.28 (DaijiworldNews/HR): ಉಳ್ಳಾಲದ ಕೆ.ಸಿ. ರೋಡ್ನಲ್ಲಿ ನಡೆದ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಎರಡನೇ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸಾಂಧರ್ಭಿಕ ಚಿತ್ರ
ಪಬ್ಜಿ ಆಟದ ವಿಷಯದಲ್ಲಿ, ಇಬ್ಬರು ಸ್ನೇಹಿತರ ನಡುವೆ ಘರ್ಷಣೆ ಉಂಟಾಗಿ ಕೋಟೆಕರ್ ಕೊಮರಂಗಲ ಬಳಿ ವಾಸಿಸುತ್ತಿದ್ದ ಮೊಹಮ್ಮದ್ ಆಕೀಫ್ (12) ಎಂಬಾತನನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ, 17 ವರ್ಷದ ಬಾಲಾಪರಾಧಿಯಾಗಿದ್ದ ಅವನ ಸ್ನೇಹಿತನನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿವರವಾದ ತನಿಖೆ ನಡೆಸಿದ ಪೊಲೀಸರು, ಸಾಕ್ಷ್ಯಗಳನ್ನು ನಾಶಮಾಡಲು ಯತ್ನಿಸಿದ್ದ ಬಾಲಕನ ತಂದೆಯನ್ನು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕನ ತಂದೆಗೆ ಷರತ್ತುಬದ್ಧ ಜಾಮೀನು ನೀಡಿದ್ದು, ವಕೀಲ ನಾರಾಯಣ ಎಲ್ ಮತ್ತು ಮಹೇಶ್ ಆರ್ ಅವರು ಆರೋಪಿಗಳ ಪರವಾಗಿ ವಾದಿಸಿದ್ದರು.