ಮಂಗಳೂರು, ಮೇ.28 (DaijiworldNews/PY): ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟದ ಯತ್ನವನ್ನು ಅಬಕಾರಿ ಮತ್ತು ರೈಲ್ವೆ ಪೊಲೀಸರು ತಡೆದಿದ್ದು, ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.
ನಗರದ ಜಂಕ್ಷನ್ ರೈಲ್ವೆಯಲ್ಲಿ ಅಬಕಾರಿ ಇಲಾಖೆ ಹಾಗೂ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಮದ್ಯ ಸಾಗಾಟದ ಯತ್ನವನ್ನು ತಡೆದಿದ್ದಾರೆ.
ದಾದರ್ ತಿರುನಲ್ವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟವಾಗುತ್ತಿತ್ತು. ಇದನ್ನು ತಡೆದ ಇಲಾಖೆ ಸುಮಾರು 138.750 ಲೀಟರ್ ಮದ್ಯ ವಶಪಡಿಸಿಕೊಂಡಿದೆ. ಆದರೆ, ಆರೋಪಿಗಳು ನಾಪತ್ತೆಯಾಗಿದ್ದಾರೆ.
ಈ ಸಂಬಂಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಬಕಾರಿ ಜಂಟಿ ಆಯುಕ್ತೆ ಶೈಲಜ ಕೋಟೆ, ದಕ್ಷಿಣ ರೈಲ್ವೆ ಮಂಗಳೂರು ನಿರೀಕ್ಷ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.