ಮಂಗಳೂರು,ಮೇ 28 (DaijiworldNews/MS): ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಡಿಸಿಪಿ ಹರಿರಾಮ್ಶಂಕರ್,ವಿನಯ್ ಗಾಂವ್ಕರ್, ಅವರು ಮೇ 28 ರ ಶುಕ್ರವಾರ ನಗರದ 80 ಕ್ಕೂ ಹೆಚ್ಚು ಮಂಗಳಮುಖಿಯರಿಗೆ ದಿನಸಿ ಕಿಟ್ಗಳನ್ನು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ವಿತರಿಸಿದರು.
ಕಿಟ್ಗಳನ್ನು ವಿತರಿಸಿದ ನಂತರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಮಾತನಾಡಿ “ಪೊಲೀಸ್ ಇಲಾಖೆಯು ವಿವಿಧ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಕೋವಿಡ್ ಸಮನ್ವಯ ಹೆಲ್ಪ್ಲೈನ್ ಆರಂಭಿಸಲಾಗಿದ್ದು ಈಗಾಗಲೇ ಬಂದ ಕರೆಗಳ ಪೈಕಿ 2೨ ಮುಖ್ಯ ಕರೆಗಳಿಗೆ ಸ್ಪಂದಿಸಲಾಗಿದೆ. ಸಮನ್ವಯ ಪ್ಲಾಟ್ಫಾರ್ಮ್ ಮೂಲಕ ಅಗತ್ಯವಿರುವವರಿಗೆ ದಿನಸಿ ಕಿಟ್ಗಳು, ಔಷಧಿ ಕಿಟ್ಗಳು, ಆಸ್ಪತ್ರೆಗಳಲ್ಲಿ ಹಾಸಿಗೆಯ ವ್ಯವಸ್ಥೆ, ಮತ್ತು ಇತರ ಅಗತ್ಯ ಸಹಾಯಗಳನ್ನು ಮಾಡುವ ಮೂಲಕ ಸಹಾಯ ಹಸ್ತ ಚಾಚಿದೆ ಎಂದರು.
ಮಂಗಳಮುಖಿಯರು ಕಷ್ಟದಲ್ಲಿರುವ ಬಗ್ಗೆ ತಿಳಿದು, ದಾನಿ ಅರುಣ್ ವಿಜಯೇಂದ್ರ ಭಟ್ ಅವರನ್ನು ಸಂಪರ್ಕಿಸಿದಾಗ 80 ದಿನಸಿ ಕಿಟ್ಗಳನ್ನು ನೀಡಲು ಒಪ್ಪಿದ್ದಾರೆ. ಇದೇ ರೀತಿ ಸಮಾಜದಲ್ಲಿ ಸಹಾಯ ಮಾಡಲು ಸಮರ್ಥರಾದವರು ಬಿಕ್ಕಟ್ಟಿನ ಸಂದರ್ಭದಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ಮುಂದೆ ಬರಬೇಕು ಎಂದು ಆಯುಕ್ತರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಾನಿ ಅರುಣ್ ಭಟ್ ಅವರನ್ನು ಗೌರವಿಸಲಾಯಿತು.ಈ ಸಂದರ್ಭ ಎಸಿಪಿಗಳಾದ ಎಸ್. ಮಹೇಶ್ ಕುಮಾರ್, ನಟರಾಜ್, ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ. ಮತ್ತು ಸಿಸಿಬಿ ಸಿಬ್ಬಂದಿ ಉಪಸ್ಥಿತರಿದ್ದರು.
ಮಂಗಳಮುಖಿಯರ ಪರವಾಗಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅರುಂಧತಿ" ದೇಶದ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ, ಜೀವನವನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ನಮಗೆ ಈ ಆಹಾರದ ಕಿಟ್ ಕೊಡಿಸಿದ್ದಾರೆ. ಪೊಲೀಸರಿಗೆ ನಾವು ಕೃತಜ್ಞರಾಗಿದ್ದೇವೆ" ಎಂದು ಹೇಳಿದ್ದಾರೆ