ಕುಂದಾಪುರ, ಮೇ 28 (DaijiworldNews/SM): ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಂಡ್ಸೆಯಲ್ಲಿ ಶುಕ್ರವಾರ ನಡೆದಿದೆ.
ರಾಜು ಮೊಗವೀರ ಮೃತ ದುರ್ದೈವಿ. ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೆಳ್ಳಾಲ ಕಡೆಯಿಂದ ವಂಡ್ಸೆ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ರಾಜು ಮೊಗವೀರ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಕಾರಣ ಆಸ್ಪತ್ರೆಗೆ ಸಾಗಿಸುವಾಗ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ದೃಢ ಪಡಿಸಿದ್ದಾರೆ. ಟಿಪ್ಪರ್ ಚಾಲಕನ ಅಜಾಗರೂಕತೆಯ, ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.