ಬಂಟ್ವಾಳ, ಮೇ.29 (DaijiworldNews/HR): ಕೊರೊನಾ ಸೋಂಕಿನಿಂದ ಪೋಷಕರು ಮೃತಪಟ್ಟ ಸರ್ವ ಧರ್ಮದ ಬಡ ಕುಟುಂಬಗಳಿದ್ದರೆ ಗುರುತಿಸಿ ಅಂತಹ ಮನೆಯಲ್ಲಿರುವ ಮಕ್ಕಳ ವಿದ್ಯಾಭ್ಯಾಸ ಹಾಗೂ ಪೋಷಣೆಯ ಜವಬ್ದಾರಿಯನ್ನು ಬಂಟ್ವಾಳ ಶಾಸಕರು ಹಾಗೂ ಬಿಜೆಪಿ ಪಕ್ಷದ ನಿಧಿ ಯೋಜನೆಯ ಮೂಲಕ ವಹಿಸಿಕೊಳ್ಳಲು ನಿಶ್ಚಯ ಮಾಡಿದ್ದೇವೆ ಎಂದು ಬಂಟ್ವಾಳ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, "ನರೇಂದ್ರ ಮೋದಿಯವರ ಆಡಳಿತದ ಏಳನೇ ವರ್ಷದ ಸಂಭ್ರಾಮಾಚರಣೆಯನ್ನು ಸೇವೆಯ ಮೂಲಕ ಆಚರಿಸಲು ನಿರ್ಧರಿಸಿದ್ದು ಈ ನಿಧಿಗೆ ಶಾಸಕರು ಹತ್ತುಲಕ್ಷ ಘೋಷಣೆ ಮಾಡಿದ್ದು, ಬೆಜೆಪಿ ಪ್ರಮುಖರಿಂದ ಧನಸಂಗ್ರಾಹ ಮಾಡಿ ಒಟ್ಟು 25 ಲಕ್ಷ ರೂಗಳನ್ನು ನಿಧಿಯ ಪ್ರತ್ಯೇಕ ಖಾತೆಯಲ್ಲಿ ಜಮೆ ಮಾಡಿ ಬಂಟ್ವಾಳ ಬಿಜೆಪಿ ಕ್ಷೇಮ ನಿಧಿ ಸ್ಥಾಪಿಸಲಾಗುವುದು" ಎಂದರು.
ಮೇ.30 ರಂದು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ನಿಧಿ ಸಂಗ್ರಹಣೆಗೆ ಚಾಲನೆ ನೀಡಲಾಗುತ್ತದೆ.
"ಇದು ಕೊರೊನಾಕ್ಕೆ ಸೀಮಿತವಾಗದೆ ಮುಂದಿನ ದಿನಗಳಲ್ಲಿ ಬಡ ಕುಟುಂಬಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ಈ ಯೋಜನೆಗೆ ಯೋಚನೆ ಮಾಡಿ ಕಾರ್ಯರೂಪಕ್ಕೆ ತರಲು ಯತ್ನಿಸಿದ್ದೇವೆ" ಎಂದು ಹೇಳಿದ್ದಾರೆ.
ಇನ್ನು ಮೇ.30 ರಂದು 59 ಗ್ರಾಮದ ಬೂತ್ಗಳಲ್ಲಿ ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗುತ್ತದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅನಂತಾಡಿ, ನೆಟ್ಲಮೂಡ್ನೂರು ಎರಡು ಗ್ರಾಮದಲ್ಲಿ ನಡೆಯುವ ಸೇವಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.
ವಿಶೇಷ ವಾಗಿ ಬಂಟ್ವಾಳ ಶಾಸಕರ ಮುತುವರ್ಜಿಯಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯನ್ನು ಅತ್ಯುನ್ನತ ಮಟ್ಟಕ್ಕೆ ತಂದ ಹೆಗ್ಗಳಿಕೆ ಇವರದು ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸುವ ಮೂಲಕ ಬಂಟ್ವಾಳ ತಾಲೂಕಿನ ಜನತೆಯ ಆರೋಗ್ಯ ರಕ್ಷಣೆ ಗೆ ಬೇಕಾದ ಸಂಪೂರ್ಣ ವ್ಯವಸ್ಥೆ ಗಳನ್ನು ಸರಕಾರದ ಅನುದಾನ ಹಾಗೂ ವೈಯಕ್ತಿಕ ನೆರವಿನಿಂದ ಮಾಡಿದ್ದಾರೆ ಎಂಬುದು ಅತ್ಯಂತ ಖುಷಿಯ ವಿಚಾರ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬಿಜೆಪಿ ಪ್ರಮುಖರಾದ ಡೊಂಬಯ್ಯ ಅರಳ, ರವೀಶ್ ಶೆಟ್ಟ ಕರ್ಕಳ, ಮೋನಪ್ಪ ದೇವಸ್ಯ, ಸುದರ್ಶನ ಬಜ, ಪ್ರದೀಪ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.