ಮಂಗಳೂರು, ಮೇ.30 (DaijiworldNews/HR): ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಇಂದು ಮಣ್ಣಗುಡ್ಡೆಯ ಗಾಂಧಿ ಪಾರ್ಕ್ನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಲೇಡಿಹಿಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.