ಉಡುಪಿ, ಮೇ.31 (DaijiworldNews/HR): ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಭೇಟಿ ನೀಡಿ ಆರೋಗ್ಯ ಪರಿಕರಗಳು ಹಾಗೂ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ, ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ ಕುಂದು ಕೊರತೆಗಳ ಮಾಹಿತಿಯನ್ನು ಪಡೆದರು.
ಅಜೆಕಾರು ವಲಯದ ಆಶಾ ಕಾರ್ಯಕರ್ತೆಯರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮೀಣ ವಲಯದಲ್ಲಿ ಹಬ್ಬಿರುವ ಕೊರೊನಾ ಸೋಂಕಿತರ ಮಾಹಿತಿ ಪಡೆದರು.
ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವ ಪ್ರತಿಯೊಬ್ಬರ ಕಡ್ಡಾಯವಾಗಿ ಟೆಸ್ಟ್ ಮಾಡಿಸಬೇಕು. ಆರೋಗ್ಯ ಕಾರ್ಯಕರ್ತರಿಗೆ ಏನಾದರು ತೊಂದರೆಯಾದರೆ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ಮುಲಾಜಿಲ್ಲದೆ ಕಾನೂನು ಕ್ರಮಜಾರಿಗೊಳಿಸಬೇಕು, ಕೊರೊನಾ ನಿರ್ಮುಲನೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಐಸಿಎಂಆರ್ ಜಾರಿಗೊಳಿಸಿದ ನಿಯಮಗಳನ್ನು ಪಾಲಿಸಿ ಶವಸಂಸ್ಕಾರ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಅನುಷಾ ಶೆಟ್ಟಿ, ಅಜೆಕಾರು ಕಡ್ತಲ ಗ್ರಾ.ಪಂ ವ್ಯಾಪ್ತಿಯ ಮೂವತ್ತಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.