ಮಂಗಳೂರು, ಜೂ 01(DaijiworldNews/MS): ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.8 ಕ್ಕೆ ಅಂತಿಮ ತೀರ್ಪು ಹೊರಬೀಳಲಿದೆ.ಸೋಮವಾರ ಪ್ರಕಟವಾಗಬೇಕಿದ್ದ ತೀರ್ಪನ್ನು ಕೊವೀಡ್ ಕಾರಣದಿಂದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಧೀಶ ಜೆ.ಎನ್ ಜಗದೀಶ್ ಸುಬ್ರಹ್ಮಣ್ಯ ಮುಂದೂಡಿದ್ದಾರೆ.
ಪ್ರಕರಣದ ಆರೋಪಿ ಕೊಲೆಯಾದ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಪೊಲೀಶ್ ಭದ್ರತೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಜೂ. ೮ ರಂದು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಮತ್ತು ರಾಘವೇಂದ್ರ ಇರುವಂತೆ ಸೂಚಿಸಲಾಗಿದೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಉಳಿದ ಆರೋಪಿಗಳು ಹಾಜರಿರುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ
ಈ ಪೈಕಿ ಶ್ರೀನಿವಾಸ್ ಭಟ್ ಈಗಾಗಲೇ ಮೃತಪಟ್ಟಿದ್ದಾರೆ.