ಮಂಗಳೂರು, ಜೂ 3 (DaijiworldNews/MS): ಲಸಿಕೆ ವಿಚಾರದಲ್ಲಿ ಸಾರ್ವಜನಿಕರನ್ನು ದಾರಿತಪ್ಪಿಸಿರುವ ಆರೋಪ ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವುದಾಗಿ ಮಾಜಿ ಸಚಿವ ಮತ್ತು ಶಾಸಕ ಯು.ಟಿ.ಖಾದರ್ ಅವರು ಜೂ. 03 ರ ಗುರುವಾರ ಹೇಳಿದ್ದಾರೆ.
ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖಾದರ್, " ಲಸಿಕೆ ಹಿಂದಿನ ವಿಜ್ಞಾನ ಮತ್ತು ತರ್ಕದ ಬಗ್ಗೆ ಮಾತನಾಡುವ ಬದಲು ರಾಜಕೀಯ ಮಾಡುತ್ತಿದೆ. ಆದರೆ ಲಸಿಕೆ ಕುರಿತು ರಾಜಕೀಯ ಮಾಡುವ ಬದಲು, ಲಸಿಕೆಯ ಹಿಂದಿನ ತರ್ಕ ಮತ್ತು ವಿಜ್ಞಾನದ ಬಗ್ಗೆ ಮಾತನಾಡಿ. ಒಂದು ವೇ ಳೆ ಲಸಿಕೆಗಳ ಬಗ್ಗೆ ನಾನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಿದ್ದೇನೆ ಎಂಬುದು ಸಾಬೀತಾದರೆ ನಾನು ರಾಜಕೀಯವನ್ನು ತೊರೆಯುತ್ತೇನೆ" ಎಂದು ಖಾದರ್ ಹೇಳಿದ್ದಾರೆ.
ಜನರನ್ನು ದಾರಿ ತಪ್ಪಿಸಲು ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಇವರು ನಾಚಿಕೆಪಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಸಾಕಷ್ಟು ಲಸಿಕೆಗಳನ್ನು ನೀಡುವಲ್ಲಿ ವಿಫಲವಾಗಿವೆ. ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಳು ದೊರಕಿದರೂ ಸಾಕಷ್ಟು ಲಸಿಕೆಗಳನ್ನು ಪಡೆಯಲು ಸರ್ಕಾರ ವಿಫಲವಾಗಿದೆ. ದೇಶಾದಲ್ಲಿ ದಿನಕ್ಕೆ ಎಷ್ಟು ಲಸಿಕೆಗಳನ್ನು ಉತ್ಪಾದಿಸಲಾಗುತ್ತದೆ ಮತ್ತು ಅದನ್ನು ಯಾರಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ಸರ್ಕಾರ ಉತ್ತರಿಸಬೇಕು ಎಂದು ಹೇಳಿದರು.
ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಸರಿಯಾದ ನಿಲುವು ಇಲ್ಲ. ಶಿಕ್ಷಕರಿಗೆ ಯಾವುದೇ ಪ್ಯಾಕೇಜ್ ಘೋಷಿಸದೆ ಸರ್ಕಾರ ಶಿಕ್ಷಕರನ್ನು ಭಿಕ್ಷುಕರನ್ನಾಗಿ ಮಾಡುತ್ತಿದೆ. ಎಸ್ಎಸ್ಎಲ್ಸಿ ಮತ್ತು ಎರಡನೇ ಪಿಯುಸಿ ಪರೀಕ್ಷೆಗಳಲ್ಲಿ ಸ್ಪಷ್ಟತೆ ಇಲ್ಲ. ಐಟಿ ಕ್ಷೇತ್ರದಲ್ಲಿ ದೇಶ ಮುಂದಿದೆ. ಪರೀಕ್ಷೆಗಳನ್ನು ನಡೆಸಲು ಸರ್ಕಾರ ತಾಂತ್ರಿಕ ವಿಧಾನಗಳನ್ನು ಬಳಸಬಹುದು. ಸರ್ಕಾರ ಈ ಬಗ್ಗೆ ಯೋಚಿಸಬೇಕು ಎಂದು ಖಾದರ್ ಹೇಳಿದರು.