ಉಡುಪಿ, ಜೂ 05 (DaijiworldNews/MS): ವೃದ್ದ ಮಹಿಳೆಯೊಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಜೂನ್ 05 ರ ಶನಿವಾರ ಬೆಳಗಿನ ಜಾವ ನಗರದ ಹೃದಯ ಭಾಗದ ತಾಲೂಕು ಕಚೇರಿ ಬಳಿ ನಡೆದಿದೆ.
ಮೃತರನ್ನು ಗಂಗಮ್ಮ (70) ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಮೂಲದವರಾದ ಇವರು ನಗರದ ಬಿಗ್ ಬಜಾರ್ ಸನಿಹದಲ್ಲಿರುವ ವಸತಿಸಂಕೀರ್ಣದಲ್ಲಿಯ ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಅವರ ಪುತ್ರ ಉಡುಪಿಯಲ್ಲಿರುವ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಬಾಧಿತರಾಗಿ ಗುಣಮುಖರಾಗಿದ್ದರು. ಇವರ ಪತಿಯು ಕೊರೊನಾ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಇಂದು ಬೆಳಗ್ಗೆ ವಸತಿಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಅವರು ಆತ್ಮಹತ್ಯೆಕೊಂಡಿರ ಬಹುದೆಂದು ಶಂಕಿಸಲಾಗಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವಪರೀಕ್ಷೆಗೆ ಶವಸಾಗಿಸಲು ಇಲಾಖೆಗೆ ಸಹಕರಿಸಿದರು. ಘಟನ ಸ್ಥಳದಲ್ಲಿದ್ದು ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಅರುಣ್ ಯು. ಕಾನೂನು ಪ್ರಕ್ರಿಯೆ ನಡೆಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821