ಕುಂದಾಪುರ, ಜೂ 05 (DaijiworldNews/MS): ಕುಂದಾಪುರದ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಶನಿವಾರ ಬೆಳಿಗ್ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುಂದಾಪುರ ಲಸಿಕಾ ಕೇಂದ್ರದಲ್ಲಿ ಯಾವುದೇ ಗೊಂದಲವಿಲ್ಲ. ನೋಡೆಲ್ ಅಧಿಕಾರಿಯನ್ನು ನೇಮಕ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಿರುವ ಗ್ರಾಮ ಪಂಚಾಯತ್ಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು ಜೂನ್ 7ರ ಬಳಿಕ ಅಲ್ಲಿನ ಪರಿಸ್ಥಿತಿ, ಪಾಸಿಟಿವ್ ಪ್ರಮಾಣ ನೋಡಿಕೊಂಡು ನಿರ್ಧಾರ ತಗೆದುಕೊಳ್ಳಲಾಗುವುದು. ಜೂನ್ 8 ರಂದು ಒಂದು ದಿನ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಎ.ಸಿ ಕೆ.ರಾಜು, ಕುಂದಾಪುರ ಉಪವಿಭಾಗ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರಾಬರ್ಟ್ ರೆಬೆಲ್ಲೊ, ಡಿವೈಎಸ್ಪಿ ಶ್ರೀಕಾಂತ್, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ನೋಡೆಲ್ ಅಧಿಕಾರಿ ದಿನಕರ ಶೆಟ್ಟಿ, ಕಂದಾಯ ಇಲಾಖೆಯ ದಿನೇಶ ಮೊದಲಾದವರು ಉಪಸ್ಥಿತರಿದ್ದರು.