ಮಂಗಳೂರು, ಜೂ.5(DaijiworldNews/HR): ಕೊರೊನಾ ಲಾಕ್ಡೌನ್ ಅವಧಿಯಲಿ ಪಿಲಿಕುಳ ಮೃಗಾಲಯದಲ್ಲಿ ವನ್ಯಜೀವಿಗಳ ಸಂತಾನ ಅಭಿವೃದ್ಧಿಯಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜೆ. ಭಂಡಾರಿ ತಿಳಿಸಿದ್ದಾರೆ.
ಹುಲಿ ರಾಣಿ:
10 ವರ್ಷ ಪ್ರಾಯದ ಹುಲಿ 'ರಾಣಿ' ಮೂರು ಮರಿಗಳಿಗೆ ಜನ್ಮ ನೀಡಿದ್ದು, 2019 ರ ಸಾಲಿನಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಮತ್ತು ವಿಜಯ ಎಂಬ 5 ಮರಿಗಳಿಗೆ ಜನ್ಮ ನೀಡಿ ಈಗ ಬೆಳೆದು ದೊಡ್ಡದಾಗಿವೆ. ಈಗ ಜನಿಸಿದ ಮರಿಗಳು ಆರೋಗ್ಯವಾಗಿದ್ದು ಇನ್ನು 16 ದಿನಗಳಲ್ಲಿ ಕಣ್ಣು ತೆರೆಯಲಿವೆ.
ಕಳೆದ ಸಾಲಿನಲ್ಲಿ ಜನಿಸಿದ 5 ಹುಲಿಗಳಿಗೆ ಪ್ರತ್ಯೇಕವಾದ ವಾಸದ ಮನೆಯನ್ನು ಅಬು ದಾಬಿಯ ರಾಮದಾಸ ಕಾಮತ್ ದಂಪತಿಗಳು 15 ಲಕ್ಷ ಖರ್ಚಿನಲ್ಲಿ ಕಟ್ಟಿಸಿ ಕೊಟ್ಟಿರುತ್ತಾರೆ.
ರಾಣಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಯಮದಡಿಯಲ್ಲಿ ಬನೇರುಘಟ್ಟ ಮೃಗಾಲಯಕ್ಕೆ ಪಿಲಿಕುಲದ ಗಂಡು ಹುಲಿಯನ್ನು ನೀಡಿ ಬದಲಿಗೆ ತಂದಿರುವುದಾಗಿದ್ದು, ಈಗ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 13 ಕ್ಕೆ ಏರಿದೆ.
ಕಾಡುಶ್ವಾನ 'ದೋಳ್' ಮರಿಗಳ ಜನನ:
ಆಂದ್ರ ಪ್ರದೇಶದ ವಿಶಾಕಪಟ್ಟಣಂ ಮೃಗಾಲಯದಿಂದ ತರಿಸಲಾದ ಅಳಿವಿನಂಚಿನಲ್ಲಿರುವ ಕಾಡು ಶ್ವಾನಗಳ ವರ್ಗಕ್ಕೆ ಸೇರಿದ 'ದೋಳ್' ಇತ್ತೀಚಿಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಇದೆ 'ದೋಳ್' ಈ ಹಿಂದೆ 5 ಮರಿಗಳಿಗೆ ಜನ್ಮ ನೀಡಿತ್ತು. ಇನೊಂದು 'ದೋಳ್ ಹತ್ತು ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಳದಲ್ಲಿ "ದೋಳ್" ಕಾಡು ಶ್ವಾನಗಳ ಸಂಖ್ಯೆ 32ಕ್ಕೆ ಏರಿದೆ.
'ರಿಯಾ' ಪಕ್ಷಿಯ ಜನನ:
ಉಷ್ಕ್ರಪಕ್ಷೀಯ ವರ್ಗಕ್ಕೆ ಸೇರಿದ ಬಿಳಿ ರಿಯಾವು ಮೊಟ್ಟೆಗಳನಿಟ್ಟಿದು. ಅವುಗಳಿಗೆ ಪ್ರಯೋಗಾಲಯದಲ್ಲಿ ಕೃತಕ ಕಾವು ಕೊಡಲಾಗುತ್ತಿದೆ, ಅದಲ್ಲಿ ಈಗಾಗಲೇ ಒಂದು ಬಿಳಿ ರಿಯಾ ಮರಿಯು ಜನ್ಮ ತಾಳಿದೆ.
'ಲಟಿಕ್ಯುಲೇಟಿಡ್' ಹೆಬ್ಬಾವು:
ಅಪರೂಪದ ಅಳಿವಿನಂಚಿನಲಿರುವ 'ರಟಿಕ್ಕುಲೇಟೆಡ್' ಹೆಬ್ಬಾವು ಸುಮಾರು 20 ಮೊಟ್ಟೆಗಳನಿಟ್ಟು ಕಾವು ನೀಡುತ್ತಿದೆ. ಇದೇ ಹೆಬ್ಬಾವು ಕಳೆದ ಸಾಲಿನಲ್ಲಿ 17 ಮರಿಗಳಿಗೆ ಜನ್ಮ ನೀಡಿದೆ. ರೆಟಿಕ್ಯುಲೇಟೆಡ್ ಹೆಬ್ಬಾವು ನಿಕೊಬಾರ್ನಲ್ಲಿ ಕಾಣಸಿಗುತ್ತವೆ.
ಕಾಳಿಂಗ ಸರ್ಪ:
ಕೆಲವು ವರ್ಷಗಳ ಹಿಂದೆ ದೇಶದಲ್ಲೇ ಪ್ರಥಮಬಾರಿ ವೈಜ್ಞಾನಿಕವಾಗಿ ಕಾಳಿಂಗಗಳ ಸಂತಾನಾಭಿವೃದಿ ಪಡಿಸಿದ ಕೀರ್ತಿ ಪಿಲಿಕುಲ ಮೃಗಾಲಯಕ್ಕೆ ಸಲ್ಲುತ್ತದೆ. ಈಗ ಕಾಳಿಂಗ ನಾಗಮಣಿಯು ಆರು ಮೊಟ್ಟೆಗಳನಿಟ್ಟು ಅವುಗಳಿಗೆ ಕೃತಕ ಕಾವು ಕೊಡಲಾಗುತ್ತಿವೆ. ಪಿಲಿಕುಲದಲ್ಲಿ 19 ಕಾಳಿಂಗ ಸರ್ಪಗಳಿವೆ.
ಇನ್ನು "ಲಾಕ್ಡೌನ್ ಮುಕ್ತಯದ ನಂತರ ಚೆನೈನ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸಲಾಗುವುದು. ಪ್ರಾಣಿ ವಿನಿಮಯದಲ್ಲಿ ಒರಿಸ್ಸಾದ ನಂದನಕಾನನ್, ಸೂರತ್, ಮತ್ತು ಹೈದರಬಾದ್ ಮೃಗಾಲಯದಿಂದ ಕೆಲವು ಪ್ರಾಣಿ ಪಕ್ಷಿಗಳನ್ನು ತರುವ ಬಗ್ಯೆ ಕಾರ್ಯಕ್ರಮ ಕೈಗೊಳ್ಳಲಾಗಿದೆ" ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜೆ. ಭಂಡಾರಿ ತಿಳಿಸಿದ್ದಾರೆ.