ಉಡುಪಿ, ಜೂ.5(DaijiworldNews/HR): ಕೊರೊನಾ ಸೋಂಕು ನಿಯಂತ್ರಿಸುವುದಕ್ಕಾಗಿ ಜೂ.7ರಿಂದ ಜೂ.14ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಸಿಆರ್ಪಿಸಿ ಸೆಕ್ಷನ್ 144(3)ನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿದ್ದಾರೆ..
ಈ ಕುರಿತು ಮಾಹಿತಿ ನೀಡಿರುವ ಅವರು, "ಜಿಲ್ಲೆಯಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರವಾಹ ಸಂರಕ್ಷಣಾ ರಚನೆಗಳು, ಸಮುದ್ರ ಕೊರೆತದಿಂದ ಉಂಟಾದ ಹಾನಿಯ ಪುನರ್ ಸ್ಥಾಪನೆ ಮತ್ತು ಇತರ ಮೂಲಸೌಕರ್ಯಗಳ ದುರಸ್ತಿ ಕಾಮಗಾರಿಗಳನ್ನು ಕೊರೊನಾ ನಿಯಮಾವಳಿಯೊಂದಿಗೆ ಕಾಮಗಾರಿ ನಡೆಸಲು ಅವಕಾಶ ನೀಡಲಾಗಿದ್ದು, ಶವಸಂಸ್ಕಾರಕ್ಕೆ ಗರಿಷ್ಠ 5 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ" ಎಂದರು.
ರಫ್ತುಗಳಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಎಲ್ಲ ಘಟಕಗಳು, ಸಂಸ್ಥೆಗಳು ಶೇ. 30ರಷ್ಟು ಸಿಬಂದಿಗಳನ್ನೊಳಗೊಂಡು ನಿಯಾವಳಿಯೊಂದಿಗೆ ಕರ್ತವ್ಯ ನಿರ್ವಹಿಸಲು ಅನುಮತಿಸಿದ್ದು, 1,000ಕ್ಕಿಂತ ಹೆಚ್ಚಿ ಸಿಬಂದಿಗಳಿರುವ ಸಂಸ್ಥೆ ಶೇ.10ರಷ್ಟು ಸಿಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡಬಹುದು ಎಂದಿದ್ದಾರೆ.
ಇನ್ನು ಆಟೋ, ಕ್ಯಾಬ್, ಟ್ಯಾಕ್ಸಿಗಳ ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕೆಟ್ಗಳು ಹಾಗೂ ರೈಲು ಪ್ರಯಾಣದ ಟಿಕೆಟ್ಗಳನ್ನು ಪಾಸ್ಗಳಂತೆ ಬಳಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ ಅನುಮತಿಸಿರುವಂತೆ ಸಂಚರಿಸುವ ಟ್ಯಾಕ್ಸಿ ಹಾಗೂ ಕ್ಯಾಬ್ ಸೇವೆಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲ ಟ್ಯಾಕ್ಸಿ ಹಾಗೂ ಕ್ಯಾಬ್ ಅಗ್ರಿಗೇಟರ್ ಸೇವೆಗಳನ್ನು ನಿರ್ಬಂಧಿಸಲಾಗಿದೆ.
ಶೈಕ್ಷಣಿಕ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದು, ಆನ್ಲೈನ್, ದೂರಶಿಕ್ಷಣವನ್ನು ಅನುಮತಿಯನ್ನು ಮುಂದುವರೆಸಲಾಗಿದ್ದು, ಪೊಲೀಸ್, ಸರಕಾರಿ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಪ್ರವಾಸಿಗರು ಸೇರಿದಂತೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿಗಳಿಗೆ ಮಾತ್ರ ಕ್ವಾರಂಟೈನ್ ಸೌಲಭ್ಯ ಮತ್ತು ಸ್ಟೇಪ್ ಡೌನ್ ಹಾಸ್ಪಿಟಲ್ಗಳ ಉದ್ದೇಶಗಳಿಗೆ ಮಾತ್ರ ಹೋಟೆಲ್, ರೆಸ್ಟೋರೆಂಟ್ಗಳನ್ನು ಬಳಸಲು ಅವಕಾಶವಿದೆ" ಎಂದಿದ್ದಾರೆ.
ಇನ್ನು ಹೊಟೇಲ್ ಪಾರ್ಸೆಲ್ಗೆ ಮತ್ತು ಹೋಮ್ ಡೆಲಿವರಿ ಸೇವೆ ನೀಡಲು ಮಾತ್ರ ಅನುಮತಿಸಿದ್ದು, ಕಾಲುನಡಿಗೆಯಲ್ಲಿ ತೆರಳಿ ಪಾರ್ಸೆಲ್ ಗಳನ್ನು ಪಡೆಯಲು ಅವಕಾಶ ಇರುತ್ತದೆ. ಹೋಮ್ ಡೆಲಿವರಿ ಮಾಡುವ ಹೋಟೆಲ್ಗಳು ವಾಹನ ಉಪಯೋಗಿಸಲು ಅವಕಾಶ ವಿರುತ್ತದೆ.
ದೇವಸ್ಥಾನ, ಶಾಂಪಿಂಗ್ ಮಾಲ್, ಸಿನೆಮಾ, ಜಿಮ್, ಕ್ರೀಡಾಂಗಣ, ಉದ್ಯಾನವನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳ ಭೇಟಿ ನಿಷೇಧಿಸಲಾಗಿದೆ.
ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹ ರಕ್ಷಕದಳ, ಬಂಧಿಖಾನೆ, ನಾಗರೀಕ ರಕ್ಷಣೆ, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಂದಾಯ, ಸಾರಿಗೆ , ಕಾರ್ಮಿಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ಅಗತ್ಯವ ವಸ್ತುಗಳು ಹಾಗೂ ಸೇವೆಯನ್ನು ಪೂರೈಸುವ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯಾಚರಿಸಲಿದೆ.
ಇನ್ನು ಈ ಎಲ್ಲಾ ಆದೇಶ ಪಾಲಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ವಿಧಿಸಿ, ಕಠಿನ ಕ್ರಮಕೈಗೊಳ್ಳಲಿದ್ದು, ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.