ಮಂಗಳೂರು: ಮನೆ ವಠಾರದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದ ವಿ.ವಿ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು
Sun, Jun 06 2021 09:55:03 AM
ಮಂಗಳೂರು, ಜೂ.06 (DaijiworldNews/HR): ಹಂಪನಕಟ್ಟೆಯ ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಮನೆಯ ವಠಾರದಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ್ದಾರೆ.
ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ವಠಾರದಲ್ಲಿ ಗಿಡ ನೆಟ್ಟು ಇದನ್ನು ವಿಡಿಯೋ ಚಿತ್ರೀಕರಣ ಮಾಡಿದ್ದು ಅದನ್ನು ಕಾಲೇಜಿನ ಯೂಟ್ಯೂಬ್ ವಾಹಿನಿಯ ಮೂಲಕ ಸಾರ್ವಜನಿಕರಿಗೆ ಹಂಚಿಕೊಳ್ಳಲಾಗಿದೆ.
ಪ್ರಾಂಶುಪಾಲ ಡಾ.ಸುಭಾಷಿನಿ ಶ್ರೀವತ್ಸ ಅವರು ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ವಿಶೇಷ ಸಂದೇಶವನ್ನು ವಿಡಿಯೋದ ಮೂಲಕ ಹಂಚಿಕೊಂಡಿದ್ದು, ಕಾಲೇಜಿನ ಎಲ್ಲಾ ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇನ್ನು ಕೊರೊನ ಸಂದರ್ಭದಲ್ಲಿ ಕಾಲೇಜಿನ ಈ ಪ್ರಯತ್ನಕ್ಕೆ ಪದ್ಮಶ್ರೀ ಸಾಲು ಮರದ ತಿಮಕ್ಕರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.