ಮಂಗಳೂರು, ಜೂ 07 (DaijiworldNews/MS): ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸಿರುವ ಲಾಕ್ಡೌನ್ ಮಾರ್ಗಸೂಚಿಗಳನ್ನು ಪೊಲೀಸ್ ಕಮಿಷನರೇಟ್ ಮಿತಿಯಲ್ಲಿರುವ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಅವರು ಜೂ. 07 ಸೋಮವಾರ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆ ಮಾಸ್ಕ್ ಧರಿಸದೆ , 13,578 ಪ್ರಕರಣಗಳು, ಸಾಮಾಜಿಕ ಅಂತರ ಅನುಸರಿಸದಿದ್ದಕ್ಕಾಗಿ 91 ಪ್ರಕರಣಗಳು, ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ 253 ಪ್ರಕರಣಗಳು ದಾಖಲಾಗಿದ್ದು, 2410 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸ್ ಕಮಿಷನರೇಟ್ ಮಿತಿಯಲ್ಲಿ, 92 ಪೊಲೀಸ್ ಅಧಿಕಾರಿಗಳು / ಸಿಬ್ಬಂದಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದು 22 ಪ್ರಕರಣಗಳು ಇನ್ನೂ ಸಕ್ರಿಯವಾಗಿವೆ ಎಂದು ಹೇಳಿದ್ದಾರೆ.