ಕಾರ್ಕಳ, ಜೂ.08 (DaijiworldNews/HR): ಸುಮಾರು 1 ಲಕ್ಷ ಜನಪ್ರತಿನಿಧಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದ ಕ್ರಮವು ಶ್ಲಾಘನೀಯವಾಗಿದೆ" ಎಂದು ರಾಜ್ಯ ಬಿಜೆಪಿ ಪಂಚಾಯತ್ ರಾಜ್ ಗ್ರಾಮೀಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಹಾಗೂ ಕರ್ನಾಟಕ ಪಂಚಾಯತರಾಜ್ ಪರಿಷತ್( ರಿ.), ಬೆಂಗಳೂರು ಇದರ ಆಡಳಿತ ಮಂಡಳಿ ಸದಸ್ಯ ಸಾಣೂರು ನರಸಿಂಹ ಕಾಮತ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಮತ್ತು ಇತರ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1 ಲಕ್ಷ ಜನಪ್ರತಿನಿಧಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಲಾಗಿದೆ.
ಜನರ ನಡುವೆ ಪಂಚಾಯತಿ ಕಾರ್ಯಪಡೆ ಗಳ ಮೂಲಕ ಕೊರೊನಾ ನಿಯಂತ್ರಿಸಲು ಶ್ರಮ ಪಡುತ್ತಿರುವ ಪಂಚಾಯತಿ ,ನಗರ ಹಾಗೂ ಸ್ಥಳೀಯ ಆಡಳಿತ ಪ್ರತಿನಿಧಿಗಳಿಗೆ ಲಸಿಕೆ ನೀಡಲು ಆದೇಶ ನೀಡಿರುವುದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಈ ಬಗ್ಗೆ ಮುತುವರ್ಜಿ ವಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಇದೇ ಸಂದರ್ಭದಲ್ಲಿ ಅವರು ಅಭಿನಂದಿಸಿದ್ದಾರೆ.