ಉಳ್ಳಾಲ, ಜೂ. 08(DaijiworldNews/SM): ಮೊಬೈಲ್ ಅತಿಯಾಗಿ ಬಳಸುತ್ತಿದ್ದ ಬಾಲಕಿಗೆ ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು ಮನೆ ಬಿಟ್ಟು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲೆಪುನಿ ಎಂಬಲ್ಲಿ ನಡೆದಿದೆ.
ಬಾಲಕಿ ಅತಿಯಾಗಿ ಫೋನಿನಲ್ಲಿ ಮಾತನಾಡುತ್ತಿದ್ದಳು. ಇದನ್ನು ಆಕೆಯ ತಾಯಿ ಪ್ರಶ್ನಿಸಿದ್ದಾಳೆ. ಇದಕ್ಕೆ ಆಕೆ ಆಕ್ರೋಶಗೊಂಡಿದ್ದಾಳೆ. ಹಾಗೂ ಮನೆಯಲ್ಲಿ ಯಾವುದೇ ವಿಚಾರ ಹೇಳದೆ ನಾಪತ್ತೆಯಾಗಿದ್ದಾಳೆ.
ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು. ಬಾಲಕಿಯ ತಾಯಿ ಜೂನ್ 6 ರಂದು ಬೆಳಿಗ್ಗೆ 7.30 ಕ್ಕೆ ಮುಡಿಪು ನಗರಕ್ಕೆ ಹೋಗಿದ್ದರು ಎಂದು ಹೇಳಲಾಗಿದೆ. ಈ ಸಮಯದಲ್ಲಿ ಅವರ ಮಗಳು ಮನೆಯಲ್ಲಿ ಒಬ್ಬಳೇ ಇದ್ದಳು. ಇದೇ ವೇಳೆ ಆಕೆ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ.