ಉಡುಪಿ, ಜೂ. 08(DaijiworldNews/SM): ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
16 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 50 ಕ್ಕೂ ಹೆಚ್ಚು ಪ್ರಕರಣಗಳಿವೆ. ಜೂನ್ ೧೦ ರಿಂದ ಜೂನ್ ೧೪ ರವಿವಾರದ ವರೆಗೆ ಈ ಗ್ರಾಮ ಪಂಚಾಯಿತಿಗಳು ಸಂಪೂರ್ಣ ಲಾಕ್ಡೌನ್ ಆಗಿರಲಿವೆ" ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಈ ಹಿಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಾಕ್ ಡೌನ್ ಮಾಡಿದ ಪರಿಣಾಮ ಪಾಸಿಟಿವಿಟಿ ತುಂಬಾ ಕಡಿಮೆಯಾಗಿದೆ. ನಾವು ಆಗಾಗ್ಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡುತ್ತಿದ್ದೇವೆ. ಪಂಚಾಯತ್ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ನಾವು ಪಿಡಿಒಗಳಿಗೆ ಮಾರ್ಗದರ್ಶನ ನೀಡುತ್ತಿದ್ದೇವೆ. ಮನೆಗಳ ಸೀಲ್ ಡೌನ್ ಸಹ ಸಕಾರಾತ್ಮಕ ಫಲಿತಾಂಶಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರತಿದಿನ 3500 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಹಾಸಿಗೆ ಮತ್ತು ವೆಂಟಿಲೇಟರ್ ಸಾಕಷ್ಟು ಲಭ್ಯವಿದೆ. ಜಿಲ್ಲಾ ಮಟ್ಟದಲ್ಲಿ ಆಮ್ಲಜನಕವನ್ನು ಉತ್ಪಾದಿಸಲು ನಾವು ಯೋಜಿಸಿದ್ದೇವೆ. ಮುಂದಿನ ಅಲೆಯಲ್ಲಿ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಅಪಾಯದಲ್ಲಿ ಇರುವುದರ ಕುರಿತು ನಾವು ನಮ್ಮ ಎಲ್ಲ ತಜ್ಞರೊಂದಿಗೆ ಚರ್ಚಿಸಿದ್ದೇವೆ ಮತ್ತು 3ನೇ ಅಲೆಯನ್ನು ಎದುರಿಸಲು ಜಿಲ್ಲೆಯು ಸಿದ್ಧವಾಗಿದೆ. ಜಿಲ್ಲೆಯಲ್ಲಿ ಮೂರನೇ ಅಲೆಯನ್ನು ಎದುರಿಸಲು ಸಂಪೂರ್ಣ ಸಿದ್ದ ವಾಗಿದೆ "ಎಂದು ಅವರು ಹೇಳಿದರು.
ಲಾಕ್ಡೌನ್ಗಾಗಿ ಹೊಸದಾಗಿ ಸೇರಿಸಲಾದ 16 ಗ್ರಾಮ ಪಂಚಾಯಿತಿಗಳು:
ಕಾರ್ಕಳ ತಾಲೂಕಿನ ಬೆಳ್ಮಣ್, ಮಿಯಾರ್, ಪಳ್ಳಿ, ಕುಕ್ಕುಂದೂರ್, ನಲ್ಲೂರು, ಮರ್ಣೆ ಬೈಂದೂರು ತಾಲ್ಲೂಕಿನ ಶಿರೂರ್, ಜಡ್ಕಲ್, ನಾಡಾ, ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಕಾಪು ತಾಲೂಕಿನ ಬೆಳ್ವೆ, ಶಿರ್ವ ಗ್ರಾಮ ಪಂಚಾಯತಿ ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆ, ಅವರ್ಸೆ ಮತ್ತು ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತಿ ಜೂನ್ 10ರ ಗುರುವಾರದಿಂದ ಜೂನ್ 14ರ ಸೋಮವಾರದವರೆಗೆ ಸಂಪೂರ್ಣ ಲಾಕ್ಡೌನ್ ಆಗಲಿದೆ.