ಮಂಗಳೂರು, ಜೂ. 10 (DaijiworldNews/SM): ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿದ್ದು, ಖಾಸಗಿ ಶಾಲೆಗಳು ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದೆಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.
ಕೊವಿಡ್ ಲಾಕ್ ಡೌನ್ ನಿಂದ ಶಾಲೆ ಕಾಲೇಜು ಬಂದ್ ಆಗಿದ್ದರೂ, ವಿದ್ಯಾರ್ಥಿಗಳ ಪೋಷಕರ ಮೇಲೆ ಆಡಳಿತ ಮಂಡಳಿಗಳು ಶುಲ್ಕ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ. ಒಂದೇ ಕಂತಿನಲ್ಲಿ ಶಾಲಾ ಶುಲ್ಕ ಪಾವತಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ತಡೆಹಿಡಿಯಲಾಗುತ್ತದೆ ಎನ್ನಲಾಗುತ್ತಿದೆ. ಅಲ್ಲದೆ, ವರ್ಗಾವಣೆ ಪತ್ರ ನೀಡದೇ ಇರುವ ಬಗ್ಗೆ ಆರೋಪಗಳು ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತಕ್ಕೆ ಪೋಷಕರಿಂದ ದೂರು ಸಲ್ಲಿಸುತ್ತಿದ್ದಾರೆ.
ಸರ್ಕಾರದ ಶಾಲಾ ಕಾಲೇಜು ತೆರೆಯದಂತೆ ಸೂಚನೆ ನೀಡಿದ್ದು, ಇದನ್ನು ಉಲ್ಲಂಘಿಸಿ ಕೆಲ ಖಾಸಗಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕಲಿಸುವಂತೆ ಪೋಷಕರಿಗೆ ಒತ್ತಡ ಹೇರಲಾಗುತ್ತಿದೆ. ಕೊವಿಡ್ ನಿಂದ ಜನರು ಸಂಕಷ್ಟ ಎದುರಿಸಿದ್ದು ಈ ವೇಳೆ ಶಾಲಾ ಕಾಲೇಜುಗಳಿಂದ ಪೋಷಕರ ಮೇಲೆ ಒತ್ತಡ ಹೇರದಂತೆ ಸೂಚನೆ ನೀಡಲಾಗಿದೆ.
ಒತ್ತಡ ಹೇರಿದಲ್ಲಿ ಶಿಕ್ಷಣ ಸಂಸ್ಥೆ ಮೇಲೆ ಶಿಕ್ಷಣ ಕಾಯ್ದೆ ಅಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.