ಮಂಗಳೂರು, ಜೂ.11 (DaijiworldNews/HR): ಜೂನ್ 11 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜೂನ್ 12 ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂಧರ್ಭಿಕ ಚಿತ್ರ
ಜೂನ್ 10 ರ ಗುರುವಾರ ಕರ್ನಾಟಕದ ಕರಾವಳಿ ತೀರದಲ್ಲಿ ವ್ಯಾಪಕ ಮಳೆಯಾಗಿದೆ. ಕರಾವಳಿಯ ಅನೇಕ ಹಳ್ಳಿಗಳು ಮತ್ತು ನಗರಗಳಲ್ಲಿ ಸರಾಸರಿ ನಾಲ್ಕು ಸೆಂ.ಮೀ ಮಳೆಯಾದರೆ ಉತ್ತರ ಕನ್ನಡದಲ್ಲಿ ಎಂಟು ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಜೂನ್ 11 ರಿಂದ 14 ರವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಭಾರಿ ಮಳೆಯ ಹಿನ್ನಲೆಯಲ್ಲಿ ಜೂನ್ 12 ರಿಂದ 14 ರವರೆಗೆ ಎಲ್ಲೋ ಅಲರ್ಟ್ ಪೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಕರ್ನಾಟಕದ ಕೆಲವು ಕಡೆಗಳಲ್ಲಿ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಜೂನ್ 13 ಮತ್ತು 14 ರಂದು ಎಲ್ಲಾ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಹೊರತುಪಡಿಸಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಿಗೆ ಜೂನ್ 1 ರಿಂದ 2 ರವರೆಗೆ ಆರೆಂಜ್ ಅಲಟ್ ಘೋಷಿಸಲಾಗಿದೆ.
ಇಲಾಖೆ ನೀಡಿರುವ ವರದಿಯ ಪ್ರಕಾರ, ಈ ವರ್ಷ ಮಾನ್ಸೂನ್ ಮಳೆಯ ಸರಾಸರಿ ಸಾಮಾನ್ಯ ಮಳೆಯ ಶೇಕಡಾ 101 ರಷ್ಟಿದೆ. ಆದ್ದರಿಂದ, ಕೃಷಿ ಚಟುವಟಿಕೆಗಳು ಉತ್ತೇಜನವನ್ನು ನೀಡುವ ನಿರೀಕ್ಷೆಯಿದೆ.