ಮಂಗಳೂರು, ಜೂ 12 (DaijiworldNews/MS): ನಗರದ ನವಭಾರತ್ ಸರ್ಕಲ್ (ರಾಷ್ಟ್ರಕವಿ ಗೋವಿಂದ್ ಪೈ ವೃತ್ತ) ನ್ನು ಜೂನ್ 11 ರ ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿದೆ.
ಕೊಡಿಯಲ್ ಬೈಲ್ ಸರ್ಕಲ್ ಎಂದು ಕರೆಯಲ್ಪಡುವ ನವಭಾರತ ವೃತ್ತ ಕಳಪೆ ನಿರ್ವಹಣೆಯಿಂದಾಗಿ, ತನ್ನ ಹಿಂದಿನ ಸೌಂದರ್ಯವನ್ನು ಕಳೆದುಕೊಂಡಿದ್ದು ಇತ್ತೀಚೆಗೆ ಹೆಚ್ಚಾಗಿ ಪೋಸ್ಟರ್ಗಳು, ಬ್ಯಾನರ್ಗಳು ಮತ್ತು ಜಾಹೀರಾತುಗಳನ್ನು ಅಂಟಿಸಲು ಮಾತ್ರ ಬಳಸಲಾಗುತ್ತಿತ್ತು.
ಈ ಕುರಿತು ಮಾತನಾಡಿದ ನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, “ಅಸ್ತಿತ್ವದಲ್ಲಿದ್ದ ವೃತ್ತವೂ ಅವೈಜ್ಞಾನಿಕವಾಗಿ ನಿರ್ಮಿಸಲ್ಪಟ್ಟಿದ್ದು, ಸಂಚಾರ ಸುಗಮವಾಗಿ ಸಾಗಲು ಅನಾನುಕೂಲತೆಯನ್ನು ಉಂಟುಮಾಡುತ್ತಿದೆ. ಆದ್ದರಿಂದ ವೃತ್ತವನ್ನು ನೆಲಸಮ ಮಾಡಲಾಗಿದೆ. ಶೀಘ್ರದಲ್ಲೇ ಇಲ್ಲಿ ವೈಜ್ಞಾನಿಕ ವಲಯವನ್ನು ನಿರ್ಮಿಸಲಾಗುವುದು. ವೃತ್ತದ ಹೆಸರಿನಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ” ಎಂದು ಸ್ಪಷ್ಟಪಡಿಸಿದ್ದಾರೆ.