ಮಂಗಳೂರು, ಜೂ 12 (DaijiworldNews/PY): ದ. ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಹಿನ್ನೆಲೆ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಲಾಕ್ ಡೌನ್ ಜೂನ್ 20ರವರೆಗೆ ವಿಸ್ತರಿಸಿದ್ದಾರೆ.
ಲಾಕ್ಡೌನ್ ಜೂನ್ 20ರವರೆಗೂ ವಿಸ್ತರಣೆಯಾಗಿದ್ದರೂ ಕೂಡಾ ಜನರು ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.
ಜನರು ಕೊರೊನಾ ಮಾರ್ಗಸೂಚಿಗಳನ್ನು ಕೂಡಾ ಸರಿಯಾಗಿ ಪಾಲಿಸುತ್ತಿಲ್ಲ. ಅಲ್ಲದೇ, ಸಾಮಾಜಿಕ ಅಂತರವನ್ನು ಕೂಡಾ ಕಾಪಾಡಿಕೊಳ್ಳುತ್ತಿಲ್ಲ. ಜೂನ್ 12ರ ಶನಿವಾರದಂದು ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ತಿರುಗಾಡುತ್ತಿರುವ ದೃಶ್ಯ ಕಂಡುಬಂದಿದೆ.
ಪರಿಸ್ಥಿತಿ ಇದೇ ರೀತಿಯಾಗಿ ಮುಂದುವರೆದಲ್ಲಿ ಜೂನ್ 20ರ ಬಳಿಕವೂ ಲಾಕ್ಡೌನ್ ಮುಂದುವರೆಸುವ ಸಾಧ್ಯತೆಗಳಿವೆ.