ಬಂಟ್ವಾಳ, ಜೂ.12 (DaijiworldNews/HR): ಪಾಣೆಮಂಗಳೂರು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಮಹಿಳಾ, ಯುವ ಕಾಂಗ್ರೆಸ್ ಆಶ್ರಯದಲ್ಲಿ ಬಂಟ್ವಾಳ, ಬಿ.ಸಿ.ರೋಡ್, ಮೆಲ್ಕಾರ್ ಸಹಿತ ವಿವಿದೆಡೆಯಲ್ಲಿ ಪೆಟ್ರೋಲ್ ಪಂಪ್ಗಳ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲ ಬೆಲೆ ಏರಿಕೆಯ ವಿರುದ್ದವಾಗಿ "100 ನಾಟೌಟ್" ಪ್ರತಿಭಟನಾ ಸಭೆ ಶನಿವಾರ ನಡೆಯಿತು.
ಮಾಜಿ ಸಚಿವರಾದ ಬಿ.ರಮನಾಥ ರೈ ಅವರು ಪ್ರತಿಭಟನಾಕಾರರನ್ನದ್ದೇಶಿಸಿ ಮಾತನಾಡಿ, "ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಸರಕಾರದ ನಡೆಯ ಬಗ್ಗೆ ನಿರಂತರವಾಗಿ ನೀಡುತ್ತಲೇ ಬಂದಿರುವ ಎಚ್ಚರಿಕೆ ಹೇಳಿಕೆಗಳು ಇಂದು ಅಕ್ಷರಶಃ ಇಡೀ ದೇಶಕ್ಕೆ ಅರ್ಥವಾಗುತ್ತಿದೆ" ಎಂದು ಟೀಕಾ ಪ್ರಹಾರಗೈದರು.
ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್ ಎಸ್ ಮೊಹಮ್ಮದ್, ಪದ್ಮಶೇಖರ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಅಲ್ಬರ್ಟ್ ಮೇನಿಜಸ್, ಮಾಣಿ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಶೋಭಿತ್ ಪೂಂಜಾ, ಮಧುಸೂದನ್ ಶಣೈ, ಮಹಮದ್ ನಂದಾವರ, ಸಿದ್ದಿಕ್ ಸೇರವ್, ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಇದರ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಜಾಸ್ಮಿನ್ ಡಿ ಸೋಜ, ಮಾಜಿ ತಾಪಂ ಸದಸ್ಯೆ ಐಡಾ ಸುರೇಶ್, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ, ಗಾಯತ್ರಿ ರವೀಂದ್ರ ಸಫಲ್ಯ, ಸ್ವಪ್ನಾ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಇಬ್ರಾಹಿಂ ನವಾಜ್ ಬಡಕಬೈಲ್, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಜಗದೀಶ್ ಕೊಯಿಲ, ವಲಯ ಅಧ್ಯಕ್ಷ ಸದಾನಂದ ಶೆಟ್ಟಿ, ಮೋಹನ್ ಶೆಟ್ಟಿ, ದೇವಪ್ಪ ಕುಲಾಲ್, ರವಿ ಪೂಜಾರಿ, ಕೇಶವ ಪೂಜಾರಿ,ಶೇಖರ್ ಶೆಟ್ಟಿ, ರಾಜೇಶ್ ಗೌಡ, ಪ್ರವೀಣ್, ವಿಕ್ಟರ್ ಪಾಯಸ, ಮನೋಜ್, ದೀಪಕ್, ನವನೀತ್, ದಿನೇಶ್ ಶೆಟ್ಟಿ, ಶರಣ್, ಮೋನಪ್ಪ ಆಚಾರ್ಯ, ಕಾರ್ತಿಕ್, ವಿನೋದ್, ಸುಮಿತ್, ವಿಶ್ವನಾಥ್ ಶೆಟ್ಟಿ, ಉದಯ, ಚೇತನ್, ಮೋಹನ ಪೂಜಾರಿ, ಅನಿಲ್ ಮೊದಲಾದವರು ಉಪಸ್ಥಿತರಿದ್ದರು.