ಕಾರ್ಕಳ, ಜೂ. 13 (DaijiworldNews/HR): ಕೊರೊನಾದಂತಹ ಸಮಯದಲ್ಲಿಯೂ ದೇಶದ ಜನರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಿರುವ ಪತ್ರಕರ್ತರು ಕೊರೊನಾ ಮುಂಚೂಣಿ ಕಾರ್ಯಕರ್ತರಾಗಿದ್ದು, ಮಾಧ್ಯಮದ ಮಂದಿಯೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೂ ಸೂಕ್ತ ಸೌಲಭ್ಯ, ಸಹಕಾರ ಕಲ್ಪಿಸುವುದು ಅನಿವಾರ್ಯವಾಗಿದೆ" ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು.
ಭಾನುವಾರ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅವರು ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಕೊರೊನಾ ಪ್ರಯುಕ್ತ ಆಹಾರ ಕಿಟ್ ಗಳನ್ನು ನೀಡಿ ಮಾತನಾಡಿದ ಅವರು, "ಕಳೆದ ಲಾಕ್ ಡೌನ್ ಅವಧಿಯಲ್ಲಿ ನಮ್ಮ ಬ್ಯಾಂಕ್ ಹಾಗೂ ಸಹ ಸಂಸ್ಥೆಗಳಿಂದ ಮಾಸ್ಕ್, ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು. ಈ ಬಾರಿಯೂ ನೀಡಲಾಗಿದ್ದು, ಸಮಾಜ ಸಂಕಷ್ಟದಲ್ಲಿರುವಾಗ ಪೂರಕವಾಗಿ ಸ್ಪಂದಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇವೆ" ಎಂದರು.
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಕಿಟ್ಗಳನ್ನು ವಿತರಿಸಿದರು.
ತಹಶಿಲ್ದಾರ್ ಪುರಂದರ ಹೆಗ್ಡೆ, ನವೋದಯ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.