ಕಾರ್ಕಳ, ಜೂ. 13 (DaijiworldNews/HR): ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಗಗನಕ್ಕೇರುತ್ತಿದ್ದು ಸರಕಾರದ ಈ ಕ್ರಮವನ್ನು ಖಂಡಿಸಿ ಕಾರ್ಕಳದಲ್ಲಿ ಪೆಟ್ರೋಲ್ ಬಂಕ್ಗಳ ಮುಂಭಾಗದಲ್ಲಿ ಸರಣಿ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷ ಮುಂದುವರಿಸಿದ್ದು, 2ನೇ ದಿನಕ್ಕೆ ಕಾಲಿರಿಸಿದೆ.
ಚತುರ್ಮುಖ ಬಸದಿಯ ಮುಂಭಾಗ ಪೆಟ್ರೋಲ್ ಬಂಕ್ನ ಮುಂಭಾಗದಲ್ಲಿ ನಗರ ಕಾಂಗ್ರೆಸ್ ಕಾರ್ಕಳ, ಕಿಸಾನ್ ಕಾಂಗ್ರೆಸ್ ಕಾರ್ಕಳ, ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಒಂದೆಡೆಯಲ್ಲಿ ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ನಳಿನಿ ಆಚಾರ್ಯ ಹಾಗೂ ರಾಜ್ಯ ಕೆಪಿಸಿಸಿ ಕಿಸಾನ್ ಸಮಿತಿಯ ಕಾರ್ಯದರ್ಶಿ ಉದಯ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರವು ಜನಸಾಮಾನ್ಯ ಬದುಕಿನೊಂದಿಗೆ ಚೆಲ್ಲಾಟ ನಡೆಸುತ್ತಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ತಾಲೂಕು ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಅಸ್ಲಾಂ, ಯುವ ಕಾಂಗ್ರೆಸ್ಸಿನ ಪ್ರದೀಪ್ ಶೆಟ್ಟಿ, ಹಿರಿಯ ಕಾಂಗ್ರೆಸ್ಸಿಗರಾದ ಸಾಣೂರು ಸುಂದರ ಗೌಡ ,ಪುರಸಭಾ ಸದಸ್ಯರಾದ ರೆಹಮತ್, ಹರೀಶ್ ದೇವಾಡಿಗ, ಸೋಮನಾಥ್ ನಾಯ್ಕ್ ,ವಿನ್ನಿ ಬೊಲ್ಟ್ ಮೆಂಡೋನ್ಸಾ, ಮಾಜಿ ಪುರಸಭಾ ಸದಸ್ಯರಾದ ರಾಜೇಶ್ ದೇವಾಡಿಗ, ವಿವೇಕಾನಂದ ಶೆಣೈ, ಸುನಿಲ್ ಕೋಟ್ಯಾನ್,ನವೀನ್ ದೇವಾಡಿಗ, ಕಾಂಗ್ರೆಸ್ ಪಕ್ಷದ ಸದಸ್ಯರಾದ ರಾಜೇಂದ್ರ,ಸುನಿಲ್ ಕುಮಾರ್ ಭಂಡಾರಿ, ಹರ್ಷ ಕೆ ಶೆಟ್ಟಿ,ರಘುಪತಿ, ಸಂತೋಷ್ ದೇವಾಡಿಗ, ರಾಜೇಂದ್ರ ಪ್ರಸಾದ್, ವಿಜಯ್ ಕುಮಾರ್, ಶಶಿಧರ್, ಕೃಷ್ಣ ಮಡಿವಾಳ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಐ.ಟಿ ಸೆಲ್ ಅಧ್ಯಕ್ಷ ಸತೀಶ್ ಕಾರ್ಕಳ ಉಪಸ್ಥಿತರಿದ್ದರು.