ಮಂಗಳೂರು, ಜೂ 15( DaijiworldNews/MS): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ರಸ್ತೆ ಸಾರಿಗೆಯ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆ ಜೂನ್ 15 ಮಂಗಳವಾರ ಮುಂಜಾನೆ 3 ಗಂಟೆಗೆ ಭಾರಿ ಮಳೆಯಿಂದಾಗಿ ಬಿರುಕು ಬಿಟ್ಟಿದೆ.
ಬಿರುಕು ತುಂಬಾ ಆಳ ಮತ್ತು ಅಗಲವಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯಿದೆ. ಗುರುಪುರ ನದಿಯಲ್ಲಿರುವ ಸೇತುವೆಯ ಕೆಳಗೆ ನಡೆಯುತ್ತಿರುವ ಮರಳು ಗಣಿಗಾರಿಕೆಯು ಬಿರುಕಿಗೆ ಕಾರಣವಾಗಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಮರವೂರು ಸೇತುವೆ ಬಿರುಕಿನಿಂದ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ಕಾವೂರಿನಿಂದ ಮರವೂರು ಸೇತುವೆಯ ಇನ್ನೊಂದು ಬದಿಗೆ ಹೋಗಲು ಬಯಸುವವರು ಕಾವೂರು-ಕೂಳೂರು-ಕೆಬಿಎಸ್ ಜೋಕಟ್ಟೆ-ಪೋರ್ಕೊಡಿ-ಬಜ್ಪೆ ಮಾರ್ಗ ಅಥವಾ ಪಚ್ಚನಾಡಿ-ವಾಮಂಜೂರು-ಗುರುಪುರ-ಕೈಕಂಬ-ಬಜ್ಪೆ ಮಾರ್ಗವನ್ನು ಬಳಸಬಹುದಾಗಿದೆ.