ಬಂಟ್ವಾಳ, ಜೂ 16 (DaijiworldNews/PY): ಕೊರೊನಾ ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಮುಂದಾಳತ್ವದಲ್ಲಿ ಕರೋಪಾಡಿ ಗ್ರಾಮದಲ್ಲಿ ಕೊರೊನಾ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಕರೋಪಾಡಿ ಗ್ರಾಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಮ್ ಎಸ್ ಮೊಹಮ್ಮದ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯಉಸ್ಮಾನ್ ಕರೋಪಾಡಿ, ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಅನ್ವರ್, ಪಂಚಾಯತ್ ಉಪಾಧ್ಯಕ್ಷ ಚೆನ್ನಪ್ಪ ನಾಯಕ್, ವಲಯ ಅಧ್ಯಕ್ಷ ಸೀತಾರಾಮ್ ಭಟ್ ಮೊದಲಾದವರು ಉಪಸ್ಥಿತರಿದ್ದರು.