ಬೈಂದೂರು, ಜೂ 17 (DaijiworldNews/MS): ಅಕ್ರಮವಾಗಿ ದಾಸ್ತಾನು ಮಾಡಿದ್ದ, ನಾಲ್ಕು ಲಕ್ಷ ರೂ. ಮೌಲ್ಯದ ಅನ್ನ ಭಾಗ್ಯ ಯೋಜನೆಯ 16 ಸಾವಿರ ಕೆ.ಜಿ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಬೋಳಂಬಳ್ಳಿ ಎಂಬಲ್ಲಿನ ವಾಸಿ ಪ್ರಥ್ವೀರಾಜ್ ಜೈನ್ ಮಾಲಿಕತ್ವದ ಪ್ರಥ್ವಿ ಗೇರು ಬೀಜ ಕಾರ್ಖಾನೆ ಗೋದಾಮಿನಲ್ಲಿ ಕಿರಿಮಂಜೇಶ್ವರದ ಅಗಸ್ತೇಶ್ವರ ಕಾಲೋನಿಯ ಅಯೂಬ್ (32) ಎಂಬಾತ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ್ದ.
ಈ ಬಗ್ಗೆ ಮಾಹಿತಿ ಪಡೆದ ಬೈಂದೂರು ಆಹಾರ ನಿರೀಕ್ಷಲ ವಿನಯ್ ಕುಮಾರ್ ಗೋದಾಮಿನ ಮೇಲೆ ದಾಳಿ ನಡೆಸಿ335 ಚೀಲ (16750 ಕೆಜಿ) ಯಷ್ಟು ಅಕ್ಕಿಯನ್ನು ಮತ್ತು ಇಲೆಕ್ಟ್ರಾನಿಕ್ ತೂಕದ ಯಂತ್ರ, ಚೀಲ ಹೊಲಿಯುವ ಯಂತ್ರ ಹಾಗೂ 10 ಗೋಣಿ ಚೀಲಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.