ಬೈಂದೂರು, ಜೂ 17 (DaijiworldNews/MS): ಜೂನ್ 5ರಂದು ಹತ್ಯೆಯಾದ ಯಡಮೊಗೆ ನಿವಾಸಿ ಕೃಷಿಕ ಉದಯ ಕುಮಾರ ಗಾಣಿಗ ಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ,ಭಾರತಿಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ರೂ.1 ಲಕ್ಷ ವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಉದಯ ಗಾಣಿಗ ಕುಟುಂಬಕ್ಕೆ ಸಾಂತ್ವಾನದ ಮಾತುಗಳನ್ನಾಡಿದ ದೀಪಕ ಕುಮಾರ್ ಶೆಟ್ಟಿ ಪೋಲಿಸರು ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಬದ್ಧರಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಉಪಸ್ಥಿತರಿದ್ದರು.