ಮಂಗಳೂರು, ಜೂ.19 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ವಿಸ್ತರಣೆ ನಿರ್ಧಾರ ಅಂತಿಮವಾಗಿಲ್ಲ, ಜೂ.20ರಂದು ಸಭೆ ನಡೆಸಿ ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಈ ಕುರಿತು ದೈಜಿವರ್ಲ್ಡ್ ವಾಹಿನಿಗೆ ಮಾಹಿತಿ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ವಿಸ್ತರಣೆ ಕುರಿತು ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಜಿಲ್ಲಾಡಳಿತ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ಜೂನ್ 20ರಂದು ಸಭೆ ನಡೆಸಿ ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು" ಎಂದರು.
ಇನ್ನು ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ನಂಬಬೇಡಿ ಎಂದು ಮಾಹಿತಿ ನೀಡಿದ್ದಾರೆ.